ತಲ್ಲೂರ (ಬೆಳಗಾವಿ ಜಿಲ್ಲೆ): ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಇತರ ಹಿಂದುಳಿದ ವರ್ಗಗಳ ನಾಗರಿಕರು ರುದ್ರಭೂಮಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಿ.ಬಿ. ಅಮ್ಮಿನಬಾವಿ ಅವರಿಗೆ ಮನವಿ ಸಲ್ಲಿಸಿದರು.
‘ಪ್ರಸ್ತುತ ಶವಸಂಸ್ಕಾರಕ್ಕಾಗಿ ಖಾಲಿ ಜಾಗ, ಗುಡ್ಡ ಅಥವಾ ಬಯಲನ್ನು ಅವಲಂಬಿಸಿದ್ದೇವೆ. ಇದರಿಂದ ಬಹಳ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲೇ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ’ ಎಂದು ತಿಳಿಸಿದರು.