<p><strong>ಬೆಳಗಾವಿ: </strong>ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಡಿ. 24ರಂದು ನಗರದಲ್ಲಿ ರ್ಯಾಲಿ ನಡೆಸಲು ಅನುಮತಿ ನೀಡುವಂತೆ ಶ್ರೀರಾಮ ಸೇನೆ ಹಿಂದೂಸ್ತಾನ ಸಂಘಟನೆಯ ಪದಾಧಿಕಾರಿಗಳು ಗುರುವಾರ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ ಅವರಿಗೆ ಮನವಿ ಸಲ್ಲಿಸಿದರು.</p>.<p>‘ದೇಶಕ್ಕೆ ಈ ಕಾಯ್ದೆಯ ಅಗತ್ಯವಿದೆ. ಕೇಂದ್ರಸರ್ಕಾರಜಾರಿಗೊಳಿಸಿರುವ ಕಾಯ್ದೆ ಕುರಿತು ಸಮರ್ಪಕ ಮಾಹಿತಿ ಇಲ್ಲದವರು ವಿರೋಧ ಮಾಡುತ್ತಿದ್ದಾರೆ. ವಿರೋಧಿಸುವವರು ಕಾಯ್ದೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಧರ್ಮವೀರ ಸಂಭಾಜಿ ವೃತ್ತದಿಂದ ಕಿರ್ಲೋಸ್ಕರ್ ರಸ್ತೆ, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಶನಿವಾರ ಕೂಟ, ಕಾಕತಿವೇಸ್, ಚನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ, ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಅನುಮತಿ ನೀಡಬೇಕು’ ಎಂದು ಕೋರಿದ್ದಾರೆ.</p>.<p>ಸಂಘಟನೆಯ ಅಧ್ಯಕ್ಷ ರಮಾಕಾಂತ ಕೊಂಡಸ್ಕರ, ವಿನಾಯಕ ಪಾಟೀಲ, ಭರತ ಪಾಟೀಲ, ಬಲವಂತ ಶಿಂದೋಳ್ಕರ, ಶ್ರೀಕಾಂತ ಕೆ., ರಾಜೇಂದ್ರ ಬೈಲೂರ, ರಾಹುಲ ಬಡಸ್ಕರ, ಪರುಶರಾಮ ಪಾಖರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಡಿ. 24ರಂದು ನಗರದಲ್ಲಿ ರ್ಯಾಲಿ ನಡೆಸಲು ಅನುಮತಿ ನೀಡುವಂತೆ ಶ್ರೀರಾಮ ಸೇನೆ ಹಿಂದೂಸ್ತಾನ ಸಂಘಟನೆಯ ಪದಾಧಿಕಾರಿಗಳು ಗುರುವಾರ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ ಅವರಿಗೆ ಮನವಿ ಸಲ್ಲಿಸಿದರು.</p>.<p>‘ದೇಶಕ್ಕೆ ಈ ಕಾಯ್ದೆಯ ಅಗತ್ಯವಿದೆ. ಕೇಂದ್ರಸರ್ಕಾರಜಾರಿಗೊಳಿಸಿರುವ ಕಾಯ್ದೆ ಕುರಿತು ಸಮರ್ಪಕ ಮಾಹಿತಿ ಇಲ್ಲದವರು ವಿರೋಧ ಮಾಡುತ್ತಿದ್ದಾರೆ. ವಿರೋಧಿಸುವವರು ಕಾಯ್ದೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಧರ್ಮವೀರ ಸಂಭಾಜಿ ವೃತ್ತದಿಂದ ಕಿರ್ಲೋಸ್ಕರ್ ರಸ್ತೆ, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಶನಿವಾರ ಕೂಟ, ಕಾಕತಿವೇಸ್, ಚನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ, ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಅನುಮತಿ ನೀಡಬೇಕು’ ಎಂದು ಕೋರಿದ್ದಾರೆ.</p>.<p>ಸಂಘಟನೆಯ ಅಧ್ಯಕ್ಷ ರಮಾಕಾಂತ ಕೊಂಡಸ್ಕರ, ವಿನಾಯಕ ಪಾಟೀಲ, ಭರತ ಪಾಟೀಲ, ಬಲವಂತ ಶಿಂದೋಳ್ಕರ, ಶ್ರೀಕಾಂತ ಕೆ., ರಾಜೇಂದ್ರ ಬೈಲೂರ, ರಾಹುಲ ಬಡಸ್ಕರ, ಪರುಶರಾಮ ಪಾಖರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>