<p><strong>ಮುಗಳಖೋಡ (ಬೆಳಗಾವಿ ಜಿಲ್ಲೆ): ‘</strong>ಪಟ್ಟಣದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಯುವುದಕ್ಕಾಗಿ ಸ್ವಯಂಘೋಷಿತ ಬಂದ್ ಆಚರಿಸಲು ತೀರ್ಮಾನಿಸಲಾಗಿದೆ. ಎಲ್ಲರೂ ಇದಕ್ಕೆ ಸಹಕಾರ ಕೊಡಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಬಿ. ಡಂಬಳ ಹೇಳಿದರು.</p>.<p>ಪುರಸಭೆ ಸಭಾಭವನದಲ್ಲಿ ನಡೆದ ಕೋವಿಡ್ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಇಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಸೆಂಟರ್ ತೆಗೆಯಲು ಬೇಕಾದ ವ್ಯವಸ್ಥೆ ಇದ್ದರೂ ಶಾಸಕ ಹಾಗೂ ಸಂಸದರು ಕಾಳಜಿ ವಹಿಸುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ’ ಎಂದು ಪುರಸಭೆ ಸದಸ್ಯ ಕರೆಪ್ಪ ಮಂಟೂರ ಆರೋಪಿಸಿದರು.</p>.<p>ಶಾಸಕ ಮತ್ತು ಸಂಸದರ ಹೆಸರು ಪ್ರಸ್ತಾಪ ಆಗುತ್ತಿದ್ದಂತೆಯೇ ಗದ್ದಲದ ವಾತಾವರಣ ನಿರ್ಮಾಣವಾಗಿ ಸಭೆ ಮೊಟಕುಗೊಂಡಿತು.</p>.<p>ಉಪಾಧ್ಯಕ್ಷ ಮಹಾವೀರ ಕುರಾಡೆ, ಸದಸ್ಯರಾದ ಗೌಡಪ್ಪ ಖೇತಗೌಡರ, ವಿಠ್ಠಲ ಯಡವಣ್ಣವರ, ಜ್ಯೋತೆಪ್ಪ ಮೆಕ್ಕಳಕಿ, ಆರ್.ಕೆ. ಪಾಟೀಲ, ಪ್ರಕಾಶ ಆದಪ್ಪಗೋಳ, ಕೆಂಪಣ್ಣ ಅಂಗಡಿ, ಎ.ಬಿ. ಮಂಗಸೂಳಿ, ಹಾರೂಗೇರಿ ಪೊಲೀಸ್ ಠಾಣೆ ಪಿಎಸ್ಐ ಆರ್.ಎಸ್. ಕಂಗನೊಳ್ಳಿ, ಡಾ.ಕಿರಣ ಹಿಟ್ಟಣಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಗಳಖೋಡ (ಬೆಳಗಾವಿ ಜಿಲ್ಲೆ): ‘</strong>ಪಟ್ಟಣದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಯುವುದಕ್ಕಾಗಿ ಸ್ವಯಂಘೋಷಿತ ಬಂದ್ ಆಚರಿಸಲು ತೀರ್ಮಾನಿಸಲಾಗಿದೆ. ಎಲ್ಲರೂ ಇದಕ್ಕೆ ಸಹಕಾರ ಕೊಡಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಬಿ. ಡಂಬಳ ಹೇಳಿದರು.</p>.<p>ಪುರಸಭೆ ಸಭಾಭವನದಲ್ಲಿ ನಡೆದ ಕೋವಿಡ್ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಇಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಸೆಂಟರ್ ತೆಗೆಯಲು ಬೇಕಾದ ವ್ಯವಸ್ಥೆ ಇದ್ದರೂ ಶಾಸಕ ಹಾಗೂ ಸಂಸದರು ಕಾಳಜಿ ವಹಿಸುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ’ ಎಂದು ಪುರಸಭೆ ಸದಸ್ಯ ಕರೆಪ್ಪ ಮಂಟೂರ ಆರೋಪಿಸಿದರು.</p>.<p>ಶಾಸಕ ಮತ್ತು ಸಂಸದರ ಹೆಸರು ಪ್ರಸ್ತಾಪ ಆಗುತ್ತಿದ್ದಂತೆಯೇ ಗದ್ದಲದ ವಾತಾವರಣ ನಿರ್ಮಾಣವಾಗಿ ಸಭೆ ಮೊಟಕುಗೊಂಡಿತು.</p>.<p>ಉಪಾಧ್ಯಕ್ಷ ಮಹಾವೀರ ಕುರಾಡೆ, ಸದಸ್ಯರಾದ ಗೌಡಪ್ಪ ಖೇತಗೌಡರ, ವಿಠ್ಠಲ ಯಡವಣ್ಣವರ, ಜ್ಯೋತೆಪ್ಪ ಮೆಕ್ಕಳಕಿ, ಆರ್.ಕೆ. ಪಾಟೀಲ, ಪ್ರಕಾಶ ಆದಪ್ಪಗೋಳ, ಕೆಂಪಣ್ಣ ಅಂಗಡಿ, ಎ.ಬಿ. ಮಂಗಸೂಳಿ, ಹಾರೂಗೇರಿ ಪೊಲೀಸ್ ಠಾಣೆ ಪಿಎಸ್ಐ ಆರ್.ಎಸ್. ಕಂಗನೊಳ್ಳಿ, ಡಾ.ಕಿರಣ ಹಿಟ್ಟಣಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>