ಬೋಟ್ನಲ್ಲಿ ನಡೆಸಿದ ಕಾರ್ಯಾಚರಣೆ ಫಲ ನೀಡಿಲ್ಲ. ಧಾರಾಕಾರ ಮಳೆಯೂ ಸುರಿಯುತ್ತಿರುವುದು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಈ ನಡುವೆ, ಅವರನ್ನು ರಕ್ಷಿಸಲು ಮುಂದಾದ ಯುವಕನೊಬ್ಬ ಕೂಡ ಕೊಚ್ಚಿ ಹೋಗುವ ಹಂತದಲ್ಲಿದ್ದರು. ಕೂಡಲೇ ಮರವನ್ನು ಹಿಡಿದುಕೊಂಡು ಅದನ್ನೇರಿ ಕುಳಿತಿದ್ದರು. ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ, ಎನ್ಡಿಆರ್ಎಫ್ ಸಿಬ್ಬಂದಿ ಯುವಕನನ್ನು ರಕ್ಷಿಸಿದರು. ಆದರೆ, ಮಂಗಳವಾರದಿಂದ ಬುಧವಾರ ಸಂಜೆವರೆಗೂ ಕಾರ್ಯಾಚರಣೆ ನಡೆಸಿದರೂ ದಂಪತಿ ರಕ್ಷಿಸಲು ಆಗಿಲ್ಲ.