<p><strong>ಬೆಳಗಾವಿ: </strong>‘ಸಂಶೋಧನೆಗಳು ಜಾಗತಿಕ ಸಂವೇದನೆಯನ್ನು ಧ್ವನಿಸಬೇಕು. ಅವು ಸಾಂಪ್ರದಾಯಿಕ ಮಾದರಿಗಳನ್ನು ಅವಲಂಬಿಸದೆ ಬಹುಶಿಸ್ತೀಯ ಮಾದರಿಯಲ್ಲಿ ರೂಪುಗೊಳ್ಳಬೇಕು’ ಎಂದು ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಚ್.ಎಂ. ಮಹೇಶ್ವರಯ್ಯ ಹೇಳಿದರು.</p>.<p>ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯು ಸೋಮವಾರ ಆಯೋಜಿಸಿದ್ದ ಕನ್ನಡ ಸಂಶೋಧಕರ ದಿನಾಚರಣೆಯಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು.</p>.<p>‘ಡಾ.ಶಂಬಾ ಜೋಶಿ ಅವರು ಕಳೆದ ಶತಮಾನದಲ್ಲಿ ಸಂಶೋಧನಾ ಮಾದರಿಗಳನ್ನು ಸಿದ್ಧಪಡಿಸಿಕೊಟ್ಟಿದ್ದಾರೆ. ಅವರು ತೋರಿದ ಸಂಶೋಧನಾ ಮಾರ್ಗಗಳು ವಾಸ್ತವವಾಗಿ ಯುವ ತರುಣ ಪೀಳಿಗೆಗೆ ಕೈಗನ್ನಡಿಗಳಾಗಿವೆ’ ಎಂದರು.</p>.<p>‘ಡಾ.ಶಂಬಾ ಜನ್ಮ ದಿನವಾದ ಜ.4ನ್ನು ಕನ್ನಡ ಸಂಶೋಧಕರ ದಿನವೆಂದು ಆಚರಿಸಲಾಗುತ್ತಿದೆ. ಅವರು ಸಂಶೋಧನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಮರೆಯುವಂತಿಲ್ಲ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರೊ.ಎಂ. ರಾಮಚಂದ್ರಗೌಡ, ‘ಕನ್ನಡ ಸಂಶೋಧನೆಗಳು ಹೆಚ್ಚಾಗಬೇಕು ಹಾಗೂ ಗುಣಮಟ್ಟ ಕಾಪಾಡಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ.ಎಸ್.ಎಂ. ಗಂಗಾಧರಯ್ಯ, ‘ವಿಶ್ವವಿದ್ಯಾಲಯದಲ್ಲಿ ನಡೆದ ಸಂಶೋಧನಾ ಚಟುವಟಿಕೆಗಳು ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಸಾಂಸ್ಕೃತಿಕ ಅನನ್ಯತೆ ಎತ್ತಿ ಹಿಡಿದಿವೆ’ ಎಂದರು.</p>.<p>ವಿಭಾಗದ ಅಧ್ಯಾಪಕರಾದ ಡಾ.ಶೋಭಾ ನಾಯಕ, ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಹಾಗೂ ಡಾ.ಪಿ. ನಾಗರಾಜ ಇದ್ದರು.</p>.<p>ಪ್ರಮೋದ ತಳವಾರ ಪ್ರಾರ್ಥಿಸಿದರು. ಮಲ್ಲಿಕಾರ್ಜುನ ಹಿರೇಮಠ ಸ್ವಾಗತಿಸಿದರು. ಡಾ.ಮಹೇಶ ಗಾಜಪ್ಪನವರ ಪರಿಚಯಿಸಿದರು. ಬಸವರಾಜ ಹುಲಮನಿ ನಿರೂಪಿಸಿದರು. ಸಂತೋಷ ನಾಯಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಸಂಶೋಧನೆಗಳು ಜಾಗತಿಕ ಸಂವೇದನೆಯನ್ನು ಧ್ವನಿಸಬೇಕು. ಅವು ಸಾಂಪ್ರದಾಯಿಕ ಮಾದರಿಗಳನ್ನು ಅವಲಂಬಿಸದೆ ಬಹುಶಿಸ್ತೀಯ ಮಾದರಿಯಲ್ಲಿ ರೂಪುಗೊಳ್ಳಬೇಕು’ ಎಂದು ಕಲಬುರ್ಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಚ್.ಎಂ. ಮಹೇಶ್ವರಯ್ಯ ಹೇಳಿದರು.</p>.<p>ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯು ಸೋಮವಾರ ಆಯೋಜಿಸಿದ್ದ ಕನ್ನಡ ಸಂಶೋಧಕರ ದಿನಾಚರಣೆಯಲ್ಲಿ ಮುಖ್ಯಅತಿಥಿಯಾಗಿ ಅವರು ಮಾತನಾಡಿದರು.</p>.<p>‘ಡಾ.ಶಂಬಾ ಜೋಶಿ ಅವರು ಕಳೆದ ಶತಮಾನದಲ್ಲಿ ಸಂಶೋಧನಾ ಮಾದರಿಗಳನ್ನು ಸಿದ್ಧಪಡಿಸಿಕೊಟ್ಟಿದ್ದಾರೆ. ಅವರು ತೋರಿದ ಸಂಶೋಧನಾ ಮಾರ್ಗಗಳು ವಾಸ್ತವವಾಗಿ ಯುವ ತರುಣ ಪೀಳಿಗೆಗೆ ಕೈಗನ್ನಡಿಗಳಾಗಿವೆ’ ಎಂದರು.</p>.<p>‘ಡಾ.ಶಂಬಾ ಜನ್ಮ ದಿನವಾದ ಜ.4ನ್ನು ಕನ್ನಡ ಸಂಶೋಧಕರ ದಿನವೆಂದು ಆಚರಿಸಲಾಗುತ್ತಿದೆ. ಅವರು ಸಂಶೋಧನಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಮರೆಯುವಂತಿಲ್ಲ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರೊ.ಎಂ. ರಾಮಚಂದ್ರಗೌಡ, ‘ಕನ್ನಡ ಸಂಶೋಧನೆಗಳು ಹೆಚ್ಚಾಗಬೇಕು ಹಾಗೂ ಗುಣಮಟ್ಟ ಕಾಪಾಡಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ.ಎಸ್.ಎಂ. ಗಂಗಾಧರಯ್ಯ, ‘ವಿಶ್ವವಿದ್ಯಾಲಯದಲ್ಲಿ ನಡೆದ ಸಂಶೋಧನಾ ಚಟುವಟಿಕೆಗಳು ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಸಾಂಸ್ಕೃತಿಕ ಅನನ್ಯತೆ ಎತ್ತಿ ಹಿಡಿದಿವೆ’ ಎಂದರು.</p>.<p>ವಿಭಾಗದ ಅಧ್ಯಾಪಕರಾದ ಡಾ.ಶೋಭಾ ನಾಯಕ, ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಹಾಗೂ ಡಾ.ಪಿ. ನಾಗರಾಜ ಇದ್ದರು.</p>.<p>ಪ್ರಮೋದ ತಳವಾರ ಪ್ರಾರ್ಥಿಸಿದರು. ಮಲ್ಲಿಕಾರ್ಜುನ ಹಿರೇಮಠ ಸ್ವಾಗತಿಸಿದರು. ಡಾ.ಮಹೇಶ ಗಾಜಪ್ಪನವರ ಪರಿಚಯಿಸಿದರು. ಬಸವರಾಜ ಹುಲಮನಿ ನಿರೂಪಿಸಿದರು. ಸಂತೋಷ ನಾಯಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>