<p><strong>ಹಾರೂಗೇರಿ</strong>: ‘ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p><p>ರಾಯಬಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ಶನಿವಾರ ನಡೆದ ಮೀಸಲಾತಿಗಾಗಿ ‘ಪ್ರತಿಜ್ಞಾ ಕ್ರಾಂತಿ’ ಹೋರಾಟದಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದಿಂದ ಮೀಸಲಾತಿ ಸಿಗುವ ಭರವಸೆ ಇಲ್ಲ. ಮುಂದಿನ ದಿನಗಳಲ್ಲಿ ಎಲ್ಲ ಅಡೆ–ತಡೆ ಮೀರಿ ಹೋರಾಟ ಮಾಡಬೇಕಿದೆ’ ಎಂದರು.</p><p>‘ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಜಾತಿಗಣತಿ ಮಾಡುತ್ತಿದ್ದಾರೆ’ ಎಂದು ದೂರಿದರು.</p><p>ನೇತೃತ್ವ ವಹಿಸಿದ್ದ ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ಮೀಸಲಾತಿಗಾಗಿ ಎಂಟನೇ ಹಂತದ ಹೋರಾಟಕ್ಕೆ ಇಲ್ಲಿಂದ ಚಾಲನೆ ಕೊಡಲಾಗಿದೆ. ಇಷ್ಟು ವರ್ಷ ಶಾಂತತೆಯಿಂದ ಹೋರಾಟ ಮಾಡುತ್ತ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಕ್ರಾಂತಿಯಿಂದ ಹೋರಾಟ ಮಾಡಲು ಸಂಕಲ್ಪ ತೊಟ್ಟಿದ್ದೇವೆ’ ಎಂದು ಹೇಳಿದರು.</p><p>ಶಾಸಕ ಸಿದ್ದು ಸವದಿ, ‘ಮೀಸಲಾತಿ ಹೋರಾಟ ಮಾಡುವ ಸಂದರ್ಭ, ಪೊಲೀಸರಿಂದ ಹತ್ತಿಕ್ಕಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿದರು. ಮುಖಂಡರಾದ ಮಹಾಂತೇಶ ಕಡಾಡಿ, ಶಶಿಕಾಂತ ಪಡಸಲಗಿ, ಈರನಗೌಡ ಪಾಟೀಲ, ಬಸನಗೌಡ ಆಸಂಗಿ, ಸುನೀಲಗೌಡ ಪಾಟೀಲ, ಹನುಮಂತ ಯಲಶೆಟ್ಟಿ, ಸೋಮು ಹೊರಟ್ಟಿ, ಬಸವರಾಜ ಆಜೂರ ವೇದಿಕೆ ಮೇಲಿದ್ದರು.</p><p>ಹಾರೂಗೇರಿ ಕ್ರಾಸ್ನ ಬಸವೇಶ್ವರ ವೃತ್ತಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪೂಜೆ ಸಲ್ಲಿಸಿದರು. ನಂತರ ‘ಜೈ ಪಂಚಮಸಾಲಿ’ ಎಂಬ ಜಯಘೋಷದೊಂದಿಗೆ ಬೈಕ್ ರ್ಯಾಲಿ ಲೀಲಾಮಠದವರೆಗೆ ಸಾಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೂಗೇರಿ</strong>: ‘ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p><p>ರಾಯಬಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ಶನಿವಾರ ನಡೆದ ಮೀಸಲಾತಿಗಾಗಿ ‘ಪ್ರತಿಜ್ಞಾ ಕ್ರಾಂತಿ’ ಹೋರಾಟದಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದಿಂದ ಮೀಸಲಾತಿ ಸಿಗುವ ಭರವಸೆ ಇಲ್ಲ. ಮುಂದಿನ ದಿನಗಳಲ್ಲಿ ಎಲ್ಲ ಅಡೆ–ತಡೆ ಮೀರಿ ಹೋರಾಟ ಮಾಡಬೇಕಿದೆ’ ಎಂದರು.</p><p>‘ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಜಾತಿಗಣತಿ ಮಾಡುತ್ತಿದ್ದಾರೆ’ ಎಂದು ದೂರಿದರು.</p><p>ನೇತೃತ್ವ ವಹಿಸಿದ್ದ ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ಮೀಸಲಾತಿಗಾಗಿ ಎಂಟನೇ ಹಂತದ ಹೋರಾಟಕ್ಕೆ ಇಲ್ಲಿಂದ ಚಾಲನೆ ಕೊಡಲಾಗಿದೆ. ಇಷ್ಟು ವರ್ಷ ಶಾಂತತೆಯಿಂದ ಹೋರಾಟ ಮಾಡುತ್ತ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಕ್ರಾಂತಿಯಿಂದ ಹೋರಾಟ ಮಾಡಲು ಸಂಕಲ್ಪ ತೊಟ್ಟಿದ್ದೇವೆ’ ಎಂದು ಹೇಳಿದರು.</p><p>ಶಾಸಕ ಸಿದ್ದು ಸವದಿ, ‘ಮೀಸಲಾತಿ ಹೋರಾಟ ಮಾಡುವ ಸಂದರ್ಭ, ಪೊಲೀಸರಿಂದ ಹತ್ತಿಕ್ಕಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p><p>ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿದರು. ಮುಖಂಡರಾದ ಮಹಾಂತೇಶ ಕಡಾಡಿ, ಶಶಿಕಾಂತ ಪಡಸಲಗಿ, ಈರನಗೌಡ ಪಾಟೀಲ, ಬಸನಗೌಡ ಆಸಂಗಿ, ಸುನೀಲಗೌಡ ಪಾಟೀಲ, ಹನುಮಂತ ಯಲಶೆಟ್ಟಿ, ಸೋಮು ಹೊರಟ್ಟಿ, ಬಸವರಾಜ ಆಜೂರ ವೇದಿಕೆ ಮೇಲಿದ್ದರು.</p><p>ಹಾರೂಗೇರಿ ಕ್ರಾಸ್ನ ಬಸವೇಶ್ವರ ವೃತ್ತಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪೂಜೆ ಸಲ್ಲಿಸಿದರು. ನಂತರ ‘ಜೈ ಪಂಚಮಸಾಲಿ’ ಎಂಬ ಜಯಘೋಷದೊಂದಿಗೆ ಬೈಕ್ ರ್ಯಾಲಿ ಲೀಲಾಮಠದವರೆಗೆ ಸಾಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>