<p><strong>ಬೆಳಗಾವಿ: </strong>ಹೊರವಲಯದಲ್ಲಿರುವ ಆನಂದವಾಡಿಯ 40 ಮನೆಗಳನ್ನು ತೆರವು ಮಾಡಬೇಕು ಎನ್ನುವ ವಕ್ಫ್ ಮಂಡಳಿಯ ಆದೇಶ ಖಂಡಿಸಿ ನಿವಾಸಿಗಳು ಹಾಗೂ ಶ್ರೀರಾಮಸೇನೆ ಹಿಂದೂಸ್ತಾನ ಸಂಘಟನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ಸುಮಾರು 100 ವರ್ಷಗಳಿಂದ ನಿರ್ಮಾಣಗೊಂಡಿರುವ ಮನೆಗಳನ್ನು ತೆರವುಗೊಳಿಸಲು ಆದೇಶ ಬಂದಿರುವುದು ಖಂಡನಾರ್ಹ. ಹಿಂದಿನಿಂದಲೂ ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿದ್ದೇವೆ. ಈಗ ಏಕಾಏಕಿ ತೆರವುಗೊಳಿಸಿ ಎಂದರೆ ಹೇಗೆ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆನಂದವಾಡಿಯ ಜಾಗಕ್ಕಾಗಿ ವಕ್ಫ್ ಮಂಡಳಿ ನ್ಯಾಯಾಲಯದ ಮೆಟ್ಟಿಲು ಏರಿತ್ತು. ಅದರಂತೆ ಈಗ ಈ ಎಲ್ಲ ಮನೆಗಳನ್ನು ತೆರವುಗೊಳಿಸಿ ಜಾಗ ಮರಳಿಸುವಂತೆ ಮಂಡಳಿ ಆದೇಶ ಹೊರಡಿಸಿದ್ದಕ್ಕೆ ಪೊಲೀಸರು ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಲು ಗುರುವಾರ ಬಂದಿದ್ದಾರೆ. ನೋಟಿಸ್ ನೀಡುವ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸಂಘಟನೆಯ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.</p>.<p>ಪೊಲೀಸರು ಸಮಾಧಾನಪಡಿಸಲು ಯತ್ನಿಸಿದರು. ಆಗ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಸ್ಥಳದಲ್ಲಿ ಗೊಂದಲದ ವಾತಾವರಣ ನಿಮಾಣವಾಗಿತ್ತು.</p>.<p>‘ಈಗ ಏಕಾಏಕಿ ನೋಟಿಸ್ ನೀಡಿ ಮನೆಗಳನ್ನು ತೆರವುಗೊಳಿಸಿ ಎಂದು ಹೇಳಿದರೆ ನಾವು ಬದುಕುವುದಾದರೂ ಹೇಗೆ. ಇಂತಹ ಅವೈಜ್ಞಾನಿಕ ಹಾಗೂ ರಾಜಕೀಯಪ್ರೇರಿತ ನೋಟಿಸ್ನಿಂದ ನಾವು ಮನೆ ಕಳೆದುಕೊಳ್ಳಬೇಕಾಗುತ್ತದೆ. ಬೀದಿಗೆ ಬೀಳಬೇಕಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಯಾವುದೇ ಕಾರಣಕ್ಕೂನಮ್ಮ ಮನೆಗಳನ್ನು ಬಿಟ್ಟುಕೊಡುವುದಿಲ್ಲ. ಎಲ್ಲ ರೀತಿಯ ತೆರಿಗೆಯನ್ನೂ ಪ್ರತಿ ತಿಂಗಳೂ ತುಂಬುತ್ತಿದ್ದೇವೆ. ಈಗ ಮನೆಗಳನ್ನು ತೆರವುಗೊಳಿಸಿ ಎಂದು ಹೇಳುತ್ತಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಅನೇಕ ವರ್ಷಗಳಿಂದ ನಾವು ಆನಂದವಾಡಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದೇವೆ. ಈಗ ಈ ಜಾಗ ನಮಗೆ ಸೇರಿದೆ, ಒತ್ತುವರಿಯಾಗಿದೆ ಎಂದು ಹೇಳಿ ಮಂಡಳಿಯವರು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಜಾಗ ಬಿಟ್ಟು ಕೊಡುವುದಿಲ್ಲ. ನೋಟಿಸ್ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ’ ಎಂದು ತಿಳಿಸಿದರು.</p>.<p>ಇನ್ಸ್ಪೆಕ್ಟರ್ ರಾಘವೇಂದ್ರ ಹವಾಲ್ದಾರ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರು. ಅವರ ವಿರುದ್ಧವೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ‘ಮಂಡಳಿಯ ಆದೇಶದ ನೋಟಿಸ್ ಕೊಡಲು ನಮ್ಮ ಸಿಬ್ಬಂದಿ ಬಂದಿದ್ದಾರಷ್ಟೆ; ತೆರವುಗೊಳಿಸಲು ಅಲ್ಲ. ನಮ್ಮ ಕೆಲಸ ನಿರ್ವಹಣೆಗೆ ಬಂದಿದ್ದೇವಷ್ಟೆ’ ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆ ಸದಸ್ಯ ನಿತಿನ್ ಜಾಧವ, ಶ್ರೀರಾಮಸೇನೆ ಹಿಂದೂಸ್ತಾನ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ, ಎಂಇಎಸ್ ಮುಖಂಡ ಶುಭಂ ಶೇಳಕೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಹೊರವಲಯದಲ್ಲಿರುವ ಆನಂದವಾಡಿಯ 40 ಮನೆಗಳನ್ನು ತೆರವು ಮಾಡಬೇಕು ಎನ್ನುವ ವಕ್ಫ್ ಮಂಡಳಿಯ ಆದೇಶ ಖಂಡಿಸಿ ನಿವಾಸಿಗಳು ಹಾಗೂ ಶ್ರೀರಾಮಸೇನೆ ಹಿಂದೂಸ್ತಾನ ಸಂಘಟನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>‘ಸುಮಾರು 100 ವರ್ಷಗಳಿಂದ ನಿರ್ಮಾಣಗೊಂಡಿರುವ ಮನೆಗಳನ್ನು ತೆರವುಗೊಳಿಸಲು ಆದೇಶ ಬಂದಿರುವುದು ಖಂಡನಾರ್ಹ. ಹಿಂದಿನಿಂದಲೂ ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿದ್ದೇವೆ. ಈಗ ಏಕಾಏಕಿ ತೆರವುಗೊಳಿಸಿ ಎಂದರೆ ಹೇಗೆ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಆನಂದವಾಡಿಯ ಜಾಗಕ್ಕಾಗಿ ವಕ್ಫ್ ಮಂಡಳಿ ನ್ಯಾಯಾಲಯದ ಮೆಟ್ಟಿಲು ಏರಿತ್ತು. ಅದರಂತೆ ಈಗ ಈ ಎಲ್ಲ ಮನೆಗಳನ್ನು ತೆರವುಗೊಳಿಸಿ ಜಾಗ ಮರಳಿಸುವಂತೆ ಮಂಡಳಿ ಆದೇಶ ಹೊರಡಿಸಿದ್ದಕ್ಕೆ ಪೊಲೀಸರು ಅಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಲು ಗುರುವಾರ ಬಂದಿದ್ದಾರೆ. ನೋಟಿಸ್ ನೀಡುವ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸಂಘಟನೆಯ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.</p>.<p>ಪೊಲೀಸರು ಸಮಾಧಾನಪಡಿಸಲು ಯತ್ನಿಸಿದರು. ಆಗ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಸ್ಥಳದಲ್ಲಿ ಗೊಂದಲದ ವಾತಾವರಣ ನಿಮಾಣವಾಗಿತ್ತು.</p>.<p>‘ಈಗ ಏಕಾಏಕಿ ನೋಟಿಸ್ ನೀಡಿ ಮನೆಗಳನ್ನು ತೆರವುಗೊಳಿಸಿ ಎಂದು ಹೇಳಿದರೆ ನಾವು ಬದುಕುವುದಾದರೂ ಹೇಗೆ. ಇಂತಹ ಅವೈಜ್ಞಾನಿಕ ಹಾಗೂ ರಾಜಕೀಯಪ್ರೇರಿತ ನೋಟಿಸ್ನಿಂದ ನಾವು ಮನೆ ಕಳೆದುಕೊಳ್ಳಬೇಕಾಗುತ್ತದೆ. ಬೀದಿಗೆ ಬೀಳಬೇಕಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಯಾವುದೇ ಕಾರಣಕ್ಕೂನಮ್ಮ ಮನೆಗಳನ್ನು ಬಿಟ್ಟುಕೊಡುವುದಿಲ್ಲ. ಎಲ್ಲ ರೀತಿಯ ತೆರಿಗೆಯನ್ನೂ ಪ್ರತಿ ತಿಂಗಳೂ ತುಂಬುತ್ತಿದ್ದೇವೆ. ಈಗ ಮನೆಗಳನ್ನು ತೆರವುಗೊಳಿಸಿ ಎಂದು ಹೇಳುತ್ತಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಅನೇಕ ವರ್ಷಗಳಿಂದ ನಾವು ಆನಂದವಾಡಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದೇವೆ. ಈಗ ಈ ಜಾಗ ನಮಗೆ ಸೇರಿದೆ, ಒತ್ತುವರಿಯಾಗಿದೆ ಎಂದು ಹೇಳಿ ಮಂಡಳಿಯವರು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಜಾಗ ಬಿಟ್ಟು ಕೊಡುವುದಿಲ್ಲ. ನೋಟಿಸ್ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ’ ಎಂದು ತಿಳಿಸಿದರು.</p>.<p>ಇನ್ಸ್ಪೆಕ್ಟರ್ ರಾಘವೇಂದ್ರ ಹವಾಲ್ದಾರ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರು. ಅವರ ವಿರುದ್ಧವೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ‘ಮಂಡಳಿಯ ಆದೇಶದ ನೋಟಿಸ್ ಕೊಡಲು ನಮ್ಮ ಸಿಬ್ಬಂದಿ ಬಂದಿದ್ದಾರಷ್ಟೆ; ತೆರವುಗೊಳಿಸಲು ಅಲ್ಲ. ನಮ್ಮ ಕೆಲಸ ನಿರ್ವಹಣೆಗೆ ಬಂದಿದ್ದೇವಷ್ಟೆ’ ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆ ಸದಸ್ಯ ನಿತಿನ್ ಜಾಧವ, ಶ್ರೀರಾಮಸೇನೆ ಹಿಂದೂಸ್ತಾನ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ, ಎಂಇಎಸ್ ಮುಖಂಡ ಶುಭಂ ಶೇಳಕೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>