<p><strong>ಬೈಲಹೊಂಗಲ:</strong> ‘ಬೈಲಹೊಂಗಲ ಹಾಗೂ ಕಿತ್ತೂರು ಮತಕ್ಷೇತ್ರ ವ್ಯಾಪ್ತಿಯ ಎಲ್ಮ ಲಗಳಲ್ಲಿ ಮಳೆಯಿಂದಾಗುವ ಯಾವುದೇ ತರಹದ ಹಾನಿ, ಸಮಸ್ಯೆಗಳ ಕುರಿತು ಜಂಟಿ ಸಮೀಕ್ಷೆ ನಡೆಸಿ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು’ ಎಂದು ಶಾಸಕರಾದ ಮಹಾಂತೇಶ ಕೌಜಲಗಿ, ಚನ್ನಮ್ಮನ ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಸೂಚಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಬೈಲಹೊಂಗಲ ಹಾಗೂ ಚನ್ನಮ್ಮನ ಕಿತ್ತೂರ ಮತಕ್ಷೇತ್ರದ ಪ್ರವಾಹ ನಿಯಂತ್ರಣ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕಲುಷಿತ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಸರ ವಹಿಸಬೇಕು. ಮನೆಗಳು ಬಿದ್ದು ಜೀವ ಹಾನಿಗೊಳಗಾಗುವ ಬಗ್ಗೆ ಮುಂಚಿತವಾಗಿ ಸಭೆ ಮಾಡಿ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳೀಯ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು’ ಎಂದು ಹೇಳಿದರು. </p>.<p>ತಹಶೀಲ್ದಾರ್ ಎಚ್.ಎನ್.ಶಿರಹಟ್ಟಿ ಮಾತನಾಡಿ, ‘ಎರಡೂ ಮತಕ್ಷೇತ್ರಗಳಲ್ಲಿ ಪ್ರವಾಹ ನಿಯಂತ್ರಣ ಕುರಿತು ಈಗಾಗಲೇ ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒ, ನೋಡಲ್ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗಿದೆ. ಅಗತ್ಯ ಕ್ರಮಗಳನ್ನು ಜರುಗಿಸಲಾಗಿದೆ’ ಎಂದರು.</p>.<p>ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಹೂಲಿ, ಸವದತ್ತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ:</strong> ‘ಬೈಲಹೊಂಗಲ ಹಾಗೂ ಕಿತ್ತೂರು ಮತಕ್ಷೇತ್ರ ವ್ಯಾಪ್ತಿಯ ಎಲ್ಮ ಲಗಳಲ್ಲಿ ಮಳೆಯಿಂದಾಗುವ ಯಾವುದೇ ತರಹದ ಹಾನಿ, ಸಮಸ್ಯೆಗಳ ಕುರಿತು ಜಂಟಿ ಸಮೀಕ್ಷೆ ನಡೆಸಿ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು’ ಎಂದು ಶಾಸಕರಾದ ಮಹಾಂತೇಶ ಕೌಜಲಗಿ, ಚನ್ನಮ್ಮನ ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಸೂಚಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಬೈಲಹೊಂಗಲ ಹಾಗೂ ಚನ್ನಮ್ಮನ ಕಿತ್ತೂರ ಮತಕ್ಷೇತ್ರದ ಪ್ರವಾಹ ನಿಯಂತ್ರಣ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕಲುಷಿತ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಸರ ವಹಿಸಬೇಕು. ಮನೆಗಳು ಬಿದ್ದು ಜೀವ ಹಾನಿಗೊಳಗಾಗುವ ಬಗ್ಗೆ ಮುಂಚಿತವಾಗಿ ಸಭೆ ಮಾಡಿ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳೀಯ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು’ ಎಂದು ಹೇಳಿದರು. </p>.<p>ತಹಶೀಲ್ದಾರ್ ಎಚ್.ಎನ್.ಶಿರಹಟ್ಟಿ ಮಾತನಾಡಿ, ‘ಎರಡೂ ಮತಕ್ಷೇತ್ರಗಳಲ್ಲಿ ಪ್ರವಾಹ ನಿಯಂತ್ರಣ ಕುರಿತು ಈಗಾಗಲೇ ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒ, ನೋಡಲ್ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗಿದೆ. ಅಗತ್ಯ ಕ್ರಮಗಳನ್ನು ಜರುಗಿಸಲಾಗಿದೆ’ ಎಂದರು.</p>.<p>ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಹೂಲಿ, ಸವದತ್ತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>