ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ ನಿಲ್ದಾಣಗಳಲ್ಲಿ ಇಳಿದು ಪ್ರಯಾಣಿಕರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ರೈಲು ಮಾರ್ಗ ಹಾಗೂ ನಿಲ್ದಾಣಗಳಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು. ಪಕ್ಷದ ಕಾರ್ಯಕರ್ತರು ಅವರನ್ನು ಸತ್ಕರಿಸಿದರು. ಹುಬ್ಬಳ್ಳಿ–ಬೆಳಗಾವಿ ರೈಲು ಮಾರ್ಗದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜೋಡಿ ಮಾರ್ಗದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಸಮಯ ಪಾಲನೆ ಹಾಗೂ ರೈಲುಗಳು ಮತ್ತು ನಿಲ್ದಾಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.