ಬೆಳಗಾವಿ: ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ‘ರೈತ ಕೃಷಿ-ಕಾರ್ಮಿಕ ಸಂಘಟನೆ’ (ಆರ್ಕೆಎಸ್) ನೇತೃತ್ವದಲ್ಲಿ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕುಗಳ ಮುಗಳಿಹಾಳ, ಅಕ್ಕಿಸಾಗರ, ದಾಸನಾಳ, ಬಾಗೋಜಿಕೊಪ್ಪ, ಹಿರೇಕೊಪ್ಪ, ಚಿಕ್ಕೊಪ್ಪ ಮೊದಲಾದ ಹಳ್ಳಿಗಳಲ್ಲಿ ಶುಕ್ರವಾರ ಪ್ರತಿಭಟಿಸಲಾಯಿತು.