<p>ಬೆಳಗಾವಿ: ನಗರದ ಸಾಂಬ್ರಾ ರಸ್ತೆಯಲ್ಲಿ ಶನಿವಾರ ರಾತ್ರಿ ಬೈಕಿಗೆ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ನಗರಕ್ಕೆ ಕಟ್ಟಡ ಕೆಲಸಕ್ಕೆ ಬಂದಿದ್ದ ವಿಠ್ಠಲ ಮೃತಪಟ್ಟವರು. ಅವರು ಸಾಂಬ್ರಾ ಮೂಲದವರು ಎನ್ನುವುದನ್ನು ಬಿಟ್ಟರೆ ಹೆಚ್ಚಿನ ವಿವರ ಗೊತ್ತಾಗಿಲ್ಲ.</p>.<p>ನಾಲ್ಕು ದಿನಗಳ ಹಿಂದಷ್ಟೇ ಲಾರಿ ಹಾಯ್ದು ಒಬ್ಬ ಕಾಲೇಜು ವಿದ್ಯಾರ್ಥಿನಿ, ಎರಡು ದಿನಗಳ ಹಿಂದೆ ಮತ್ತೊಬ್ಬ ಶಾಲಾ ವಿದ್ಯಾರ್ಥಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದರು.</p>.<p>ನಗರದಲ್ಲಿ ಭಾರಿ ವಾಹನಗಳ ಉಪಟಳದಿಂದ ಈಗ ಮತ್ತೊಬ್ಬ ಕಾರ್ಮಿಕನ ಬಲಿಯಾಗಿದೆ.</p>.<p>ಬೆಳಗಾವಿ- ಸಾಂಬ್ರಾ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ವಿಪರೀತವಾಗಿದೆ. ಇಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ವಹಿಸಬೇಕು ಎಂದು ಜನ ಒತ್ತಾಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೆಳಗಾವಿ: ನಗರದ ಸಾಂಬ್ರಾ ರಸ್ತೆಯಲ್ಲಿ ಶನಿವಾರ ರಾತ್ರಿ ಬೈಕಿಗೆ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ನಗರಕ್ಕೆ ಕಟ್ಟಡ ಕೆಲಸಕ್ಕೆ ಬಂದಿದ್ದ ವಿಠ್ಠಲ ಮೃತಪಟ್ಟವರು. ಅವರು ಸಾಂಬ್ರಾ ಮೂಲದವರು ಎನ್ನುವುದನ್ನು ಬಿಟ್ಟರೆ ಹೆಚ್ಚಿನ ವಿವರ ಗೊತ್ತಾಗಿಲ್ಲ.</p>.<p>ನಾಲ್ಕು ದಿನಗಳ ಹಿಂದಷ್ಟೇ ಲಾರಿ ಹಾಯ್ದು ಒಬ್ಬ ಕಾಲೇಜು ವಿದ್ಯಾರ್ಥಿನಿ, ಎರಡು ದಿನಗಳ ಹಿಂದೆ ಮತ್ತೊಬ್ಬ ಶಾಲಾ ವಿದ್ಯಾರ್ಥಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದರು.</p>.<p>ನಗರದಲ್ಲಿ ಭಾರಿ ವಾಹನಗಳ ಉಪಟಳದಿಂದ ಈಗ ಮತ್ತೊಬ್ಬ ಕಾರ್ಮಿಕನ ಬಲಿಯಾಗಿದೆ.</p>.<p>ಬೆಳಗಾವಿ- ಸಾಂಬ್ರಾ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ವಿಪರೀತವಾಗಿದೆ. ಇಲ್ಲಿ ಹೆಚ್ಚಿನ ಸುರಕ್ಷತಾ ಕ್ರಮ ವಹಿಸಬೇಕು ಎಂದು ಜನ ಒತ್ತಾಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>