<p><strong>ಬೆಳಗಾವಿ</strong>: ತಾಲ್ಲೂಕಿನ ಹೊನಗಾ ಗ್ರಾಮದ ಬಳಿ ಶನಿವಾರ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಟ್ರಕ್ ಹರಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ನೀಲಾ ಸದಾಶಿವ ಕೋರೆ (46) ಮತ್ತು ಮಹಾದೇವಿ ನಾವಲಗಿ (53) ಮೃತಪಟ್ಟವರು. ಮಹಿಳೆಯರು ಹೊನಗಾದಿಂದ ಯಳ್ಳೂರ ಗ್ರಾಮಕ್ಕೆ ಮದುವೆಗೆ ಹೊರಟಿದ್ದರು. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟುತ್ತಿದ್ದ ವೇಳೆ ಟ್ರಕ್ ವೇಗವಾಗಿ ಬಂದಿದೆ. ಇಬ್ಬರೂ ಅದರಡಿಗೆ ಸಿಲುಕು ಸ್ಥಳದಲ್ಲೇ ಸಾವನ್ನಪ್ಪಿದರು ಎಂದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಇದರಲ್ಲಿ ಟ್ರಕ್ ಚಾಲಕನ ಲೋಪವಿದ್ದು ಕೂಡಲೇ ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಕಾಕತಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.</p>.<p><strong>ಟ್ರಕ್ ಹಾಯ್ದು ಬೈಕ್ ಸಾವರ ಸಾವು:</strong> ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಹಲಕಿ ಗ್ರಾಮದ ಸಮೀಪ ಬೆಳಗಾವಿ– ಬಾಗಲಕೋಟೆ ರಸ್ತೆಯ ಮೇಲೆ ಟ್ರಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ, ಬೆಳಗಾವಿಯ ಶ್ರೀನಗರದ ನಿವಾಸಿ ದಯಾನಂದ ಮಹಾಂತಪ್ಪ ಕಂಠಿ (54) ಸಾವನ್ನಪ್ಪಿದ್ದಾರೆ.</p>.<p>ಟ್ರಕ್ ಚಾಲಕ ಬಸಿಡೋಣಿ ಗ್ರಾಮದ ಮಲ್ಲಿಕಾರ್ಜುನ ಪತ್ರೆಪ್ಪ ಕೊಳ್ಳಿ ಮೇಲೆ ಪ್ರಕರಣ ದಾಖಲಾಗಿದೆ. ಮೃತನ ಪತ್ನಿ ಸರಸ್ವತಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ತಾಲ್ಲೂಕಿನ ಹೊನಗಾ ಗ್ರಾಮದ ಬಳಿ ಶನಿವಾರ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಟ್ರಕ್ ಹರಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ನೀಲಾ ಸದಾಶಿವ ಕೋರೆ (46) ಮತ್ತು ಮಹಾದೇವಿ ನಾವಲಗಿ (53) ಮೃತಪಟ್ಟವರು. ಮಹಿಳೆಯರು ಹೊನಗಾದಿಂದ ಯಳ್ಳೂರ ಗ್ರಾಮಕ್ಕೆ ಮದುವೆಗೆ ಹೊರಟಿದ್ದರು. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟುತ್ತಿದ್ದ ವೇಳೆ ಟ್ರಕ್ ವೇಗವಾಗಿ ಬಂದಿದೆ. ಇಬ್ಬರೂ ಅದರಡಿಗೆ ಸಿಲುಕು ಸ್ಥಳದಲ್ಲೇ ಸಾವನ್ನಪ್ಪಿದರು ಎಂದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಇದರಲ್ಲಿ ಟ್ರಕ್ ಚಾಲಕನ ಲೋಪವಿದ್ದು ಕೂಡಲೇ ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಕಾಕತಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.</p>.<p><strong>ಟ್ರಕ್ ಹಾಯ್ದು ಬೈಕ್ ಸಾವರ ಸಾವು:</strong> ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಹಲಕಿ ಗ್ರಾಮದ ಸಮೀಪ ಬೆಳಗಾವಿ– ಬಾಗಲಕೋಟೆ ರಸ್ತೆಯ ಮೇಲೆ ಟ್ರಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ, ಬೆಳಗಾವಿಯ ಶ್ರೀನಗರದ ನಿವಾಸಿ ದಯಾನಂದ ಮಹಾಂತಪ್ಪ ಕಂಠಿ (54) ಸಾವನ್ನಪ್ಪಿದ್ದಾರೆ.</p>.<p>ಟ್ರಕ್ ಚಾಲಕ ಬಸಿಡೋಣಿ ಗ್ರಾಮದ ಮಲ್ಲಿಕಾರ್ಜುನ ಪತ್ರೆಪ್ಪ ಕೊಳ್ಳಿ ಮೇಲೆ ಪ್ರಕರಣ ದಾಖಲಾಗಿದೆ. ಮೃತನ ಪತ್ನಿ ಸರಸ್ವತಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>