<p><strong>ಅಥಣಿ:</strong> ‘ರೋಟರಿ ಸಂಸ್ಥೆಯ ಪದಾಧಿಕಾರಿಗಳು ಅರಣ್ಯ ಇಲಾಖೆ ಸಹಯೋಗದಲ್ಲಿತಾಲ್ಲೂಕಿನಾದ್ಯಂತ ಲಕ್ಷ ಸಸಿಗಳನ್ನು ನೆಟ್ಟು, ಪೋಷಿಸಬೇಕು’ ಎಂದು ರೋಟರಿ ಜಿಲ್ಲಾ ಗವರ್ನರ್ ಗಣೇಶ ಭಟ್ ಸಲಹೆ ನೀಡಿದರು.</p>.<p>ಇಲ್ಲಿ ಶನಿವಾರ ನಡೆದ ರೋಟರಿ ಕ್ಲಬ್ ಅಥಣಿ ದಕ್ಷಿಣದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನೀರು ಅಮೂಲ್ಯವಾದುದು. ಜಲಸಂಪತ್ತು ಕೊರತೆಯಾಗದಂತೆ ನೋಡಿಕೊಳ್ಳಬೇಕಾದರೆ ಅರಣ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಸಬೇಕು. ಪ್ರತಿಯೊಬ್ಬರೂ ಒಂದು ಗಿಡವನ್ನು ದತ್ತು ಪಡೆದು ಸಂರಕ್ಷಣೆ ಮಾಡಿದರೆ ಲಕ್ಷಾಂತರ ಗಿಡ ಮರಗಳನ್ನು ಬೆಳೆಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ರೋಟರಿ ಸದಸ್ಯರು ಕಾರ್ಯತತ್ಪರರಾಗಬೇಕು’ ಎಂದು ತಿಳಿಸಿದರು.</p>.<p>ರೊಟೇರಿಯನ್ ಸಂದೀಪ ಸಂಗೋರಾಮ ಮಾತನಾಡಿ, ‘ರೋಟರಿಯಿಂದ ಪ್ರಸಕ್ತ ವರ್ಷ ಕನಿಷ್ಠ 100 ಬಡ ರೋಗಿಗಳಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಆಯೋಜಿಸಬೇಕು’ ಎಂದು ಹೇಳಿದರು.</p>.<p>ಸಂಸ್ಥಾಪಕ ಅಧ್ಯಕ್ಷ ಸಿದ್ದಾರೂಢ ಸವದಿ ಮತ್ತು ನೂತನ ಅಧ್ಯಕ್ಷ ರಾಮಣ್ಣ ಧರಿಗೌಡರ ಮಾತನಾಡಿದರು. ಕಾರ್ಯದರ್ಶಿಯಾಗಿ ಸುರೇಶ ಚಿಕ್ಕಟ್ಟಿ ಮತ್ತು ಖಜಾಂಚಿಯಾಗಿ ಸಿದ್ದರಾಜ ಬೋರಾಡೆ ಪದಗ್ರಹಣ ಮಾಡಿದರು.</p>.<p>ನಿಕಟಪೂರ್ವ ಅಧ್ಯಕ್ಷ ಡಿ.ಡಿ. ಮೇಕನಮರಡಿ, ರೊಟೇರಿಯನ್ಗಳಾದ ಅನಂತ ಬಸರಿಕೋಡಿ, ಶ್ರೀಕಾಂತ ಮಾಕಾಣಿ, ಸಿದ್ದರಾಜ ಬೋರಾಡಿ, ಪಿ.ಜಿ. ಬೋರ್ಗೇಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ರೋಟರಿ ಸಂಸ್ಥೆಯ ಪದಾಧಿಕಾರಿಗಳು ಅರಣ್ಯ ಇಲಾಖೆ ಸಹಯೋಗದಲ್ಲಿತಾಲ್ಲೂಕಿನಾದ್ಯಂತ ಲಕ್ಷ ಸಸಿಗಳನ್ನು ನೆಟ್ಟು, ಪೋಷಿಸಬೇಕು’ ಎಂದು ರೋಟರಿ ಜಿಲ್ಲಾ ಗವರ್ನರ್ ಗಣೇಶ ಭಟ್ ಸಲಹೆ ನೀಡಿದರು.</p>.<p>ಇಲ್ಲಿ ಶನಿವಾರ ನಡೆದ ರೋಟರಿ ಕ್ಲಬ್ ಅಥಣಿ ದಕ್ಷಿಣದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನೀರು ಅಮೂಲ್ಯವಾದುದು. ಜಲಸಂಪತ್ತು ಕೊರತೆಯಾಗದಂತೆ ನೋಡಿಕೊಳ್ಳಬೇಕಾದರೆ ಅರಣ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಸಬೇಕು. ಪ್ರತಿಯೊಬ್ಬರೂ ಒಂದು ಗಿಡವನ್ನು ದತ್ತು ಪಡೆದು ಸಂರಕ್ಷಣೆ ಮಾಡಿದರೆ ಲಕ್ಷಾಂತರ ಗಿಡ ಮರಗಳನ್ನು ಬೆಳೆಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ರೋಟರಿ ಸದಸ್ಯರು ಕಾರ್ಯತತ್ಪರರಾಗಬೇಕು’ ಎಂದು ತಿಳಿಸಿದರು.</p>.<p>ರೊಟೇರಿಯನ್ ಸಂದೀಪ ಸಂಗೋರಾಮ ಮಾತನಾಡಿ, ‘ರೋಟರಿಯಿಂದ ಪ್ರಸಕ್ತ ವರ್ಷ ಕನಿಷ್ಠ 100 ಬಡ ರೋಗಿಗಳಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಆಯೋಜಿಸಬೇಕು’ ಎಂದು ಹೇಳಿದರು.</p>.<p>ಸಂಸ್ಥಾಪಕ ಅಧ್ಯಕ್ಷ ಸಿದ್ದಾರೂಢ ಸವದಿ ಮತ್ತು ನೂತನ ಅಧ್ಯಕ್ಷ ರಾಮಣ್ಣ ಧರಿಗೌಡರ ಮಾತನಾಡಿದರು. ಕಾರ್ಯದರ್ಶಿಯಾಗಿ ಸುರೇಶ ಚಿಕ್ಕಟ್ಟಿ ಮತ್ತು ಖಜಾಂಚಿಯಾಗಿ ಸಿದ್ದರಾಜ ಬೋರಾಡೆ ಪದಗ್ರಹಣ ಮಾಡಿದರು.</p>.<p>ನಿಕಟಪೂರ್ವ ಅಧ್ಯಕ್ಷ ಡಿ.ಡಿ. ಮೇಕನಮರಡಿ, ರೊಟೇರಿಯನ್ಗಳಾದ ಅನಂತ ಬಸರಿಕೋಡಿ, ಶ್ರೀಕಾಂತ ಮಾಕಾಣಿ, ಸಿದ್ದರಾಜ ಬೋರಾಡಿ, ಪಿ.ಜಿ. ಬೋರ್ಗೇಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>