<p><strong>ಮುಗಳಖೋಡ:</strong> ‘ಶ್ರದ್ಧೆ ಮತ್ತು ನಂಬಿಕೆಯಿಂದ ಮಠಕ್ಕೆ ರೊಟ್ಟಿ ತಟ್ಟಿ ತಂದು ಭಕ್ತರಿಗೆ ಉಣಬಡಿಸಿದರೆ, ನಿಮ್ಮ ಬಾಳಿನಲ್ಲಿ ಎಂದಿಗೂ ಅನ್ನಕ್ಕೆ ಕೊರತೆಯಾಗದು’ ಎಂದು ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಯಲ್ಲಾಲಿಂಗೇಶ್ವರ 40ನೇ ಪುಣ್ಯಸ್ಮರಣೋತ್ಸವ ಪ್ರಯುಕ್ತ ಸೋಮವಾರ ನಡೆದ ಅಜ್ಜನ ರೊಟ್ಟಿ ಬುತ್ತಿ ಜಾತ್ರೆಯಲ್ಲಿ ಭಕ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಸುತ್ತಲಿನ ಗ್ರಾಮಗಳ ಸಾವಿರಾರು ತಾಯಂದಿರರು, ವಿಠಲ ಮಂದಿರದಿಂದ ಮಠದವರೆಗೆ ಮೆರವಣಿಗೆ ಮೂಲಕ ಆಗಮಿಸಿ, ರೊಟ್ಟಿ ಬುತ್ತಿಯನ್ನು ಮಠಕ್ಕೆ ಅರ್ಪಿಸಿದರು. ಹಲವು ಭಕ್ತರು ನಾಣ್ಯಗಳಿಂದ ಶ್ರೀಗಳ ತುಲಾಭಾರ ಮಾಡಿದರು.</p>.<p>ಶಿರಶ್ಯಾಡಳದ ಮುರುಘರಾಜೇಂದ್ರ ಸ್ವಾಮೀಜಿ, ಮುದಗಲ್ಲದ ಮಹಾಂತ ಶಿವಯೋಗಿಗಳು, ಪಡಸಾವಳಗಿಯ ಶಂಭುಲಿಂಗ ಶಿವಾಚಾರ್ಯರು ಇತರರಿದ್ದರು. ಸೋಮು ಹೊರಟ್ಟಿ ವಂದಿಸಿದರು.</p>.<p>ಅಪ್ಪಾಜಿ ಸಂಗೀತ ಕಲಾ ಬಳಗದ ವತಿಯಿಂದ ಸಂಗೀತಸೇವೆ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಗಳಖೋಡ:</strong> ‘ಶ್ರದ್ಧೆ ಮತ್ತು ನಂಬಿಕೆಯಿಂದ ಮಠಕ್ಕೆ ರೊಟ್ಟಿ ತಟ್ಟಿ ತಂದು ಭಕ್ತರಿಗೆ ಉಣಬಡಿಸಿದರೆ, ನಿಮ್ಮ ಬಾಳಿನಲ್ಲಿ ಎಂದಿಗೂ ಅನ್ನಕ್ಕೆ ಕೊರತೆಯಾಗದು’ ಎಂದು ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಯಲ್ಲಾಲಿಂಗೇಶ್ವರ 40ನೇ ಪುಣ್ಯಸ್ಮರಣೋತ್ಸವ ಪ್ರಯುಕ್ತ ಸೋಮವಾರ ನಡೆದ ಅಜ್ಜನ ರೊಟ್ಟಿ ಬುತ್ತಿ ಜಾತ್ರೆಯಲ್ಲಿ ಭಕ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಸುತ್ತಲಿನ ಗ್ರಾಮಗಳ ಸಾವಿರಾರು ತಾಯಂದಿರರು, ವಿಠಲ ಮಂದಿರದಿಂದ ಮಠದವರೆಗೆ ಮೆರವಣಿಗೆ ಮೂಲಕ ಆಗಮಿಸಿ, ರೊಟ್ಟಿ ಬುತ್ತಿಯನ್ನು ಮಠಕ್ಕೆ ಅರ್ಪಿಸಿದರು. ಹಲವು ಭಕ್ತರು ನಾಣ್ಯಗಳಿಂದ ಶ್ರೀಗಳ ತುಲಾಭಾರ ಮಾಡಿದರು.</p>.<p>ಶಿರಶ್ಯಾಡಳದ ಮುರುಘರಾಜೇಂದ್ರ ಸ್ವಾಮೀಜಿ, ಮುದಗಲ್ಲದ ಮಹಾಂತ ಶಿವಯೋಗಿಗಳು, ಪಡಸಾವಳಗಿಯ ಶಂಭುಲಿಂಗ ಶಿವಾಚಾರ್ಯರು ಇತರರಿದ್ದರು. ಸೋಮು ಹೊರಟ್ಟಿ ವಂದಿಸಿದರು.</p>.<p>ಅಪ್ಪಾಜಿ ಸಂಗೀತ ಕಲಾ ಬಳಗದ ವತಿಯಿಂದ ಸಂಗೀತಸೇವೆ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>