<p><strong>ತೆಲಸಂಗ:</strong> ‘ಈ ಭಾಗದ ಬಹುದಿನದ ಬೇಡಿಕೆಯಾಗಿದ್ದ ನೀರಾವರಿಗಾಗಿ ₹ 948 ಕೋಟಿ ತಂದಿದ್ದು, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ನಾನು ಸೇರಿಕೊಂಡು ಕ್ಷೇತ್ರವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುತ್ತೇವೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.</p>.<p>ಗ್ರಾಮದಲ್ಲಿ ಮಂಗಳವಾರ ₹ 22 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ₹ 50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಇಲ್ಲಿ ರಸ್ತೆಗಳ ನಿರ್ಮಾಣ ಕೈಗೊಳ್ಳಲಾಗಿದೆ. ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು’ ಎಂದರು.</p>.<p>‘ವಸತಿನಿಲಯದ ಕಟ್ಟಡಗಳನ್ನು ಖಾಲಿ ಜಾಗವಿದೆ ಎಂದು ಎಲ್ಲೆಂದರಲ್ಲಿ ನಿರ್ಮಿಸಬಾರದು. ದೂರಾಲೋಚನೆ ಇಲ್ಲದೆ ಕೆಲಸ ಮಾಡಿದರೆ ಮುಂದೆ ನಿರ್ಮಿಸಬೇಕಾದ ಕಟ್ಟಡಗಳಿಗೆ ಅಡಚಣೆ ಆಗುತ್ತದೆ. ಜವಾಬ್ದಾರಿಯಿಂದ ಉತ್ತಮ ಕಟ್ಟಡ ನಿರ್ಮಿಸಬೇಕು’ ಎಂದು ಸೂಚಿಸಿದರು.</p>.<p>ಮುಖಂಡ ವಿವೇಕಾನಂದ ಹಳಿಂಗಳಿ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಗುರಪ್ಪ ದಾಶ್ಯಾಳ, ತಾಲ್ಲೂಕು ಪಂಚಾಯ್ತಿ ಸದಸ್ಯ ಶ್ರೀಶೈಲ ಶೆಲ್ಲೆಪ್ಪಗೋಳ, ಎಇ ಗೌಡಪ್ಪ ಗೂಳಪ್ಪನವರ, ಎ.ಜಿ. ಮುಲ್ಲಾ ಇದ್ದರು.</p>.<p>ಕಾರ್ಯಕ್ರಮಕ್ಕೆಂದು ಹಾಕಿದ್ದ ಪೆಂಡಾಲ್, ಶಾಸಕರು ಬರುವುದಕ್ಕೆ 10 ನಿಮಿಷ ಮುಂಚೆ ಕುಸಿದು ಬಿದ್ದಿತು. ನಂತರ ಸರಿಪಡಿಸಲಾಯಿತು. ಮುಂಜಾಗ್ರತೆ ವಹಿಸದ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳ ಬಗ್ಗೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಲಸಂಗ:</strong> ‘ಈ ಭಾಗದ ಬಹುದಿನದ ಬೇಡಿಕೆಯಾಗಿದ್ದ ನೀರಾವರಿಗಾಗಿ ₹ 948 ಕೋಟಿ ತಂದಿದ್ದು, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ನಾನು ಸೇರಿಕೊಂಡು ಕ್ಷೇತ್ರವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುತ್ತೇವೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.</p>.<p>ಗ್ರಾಮದಲ್ಲಿ ಮಂಗಳವಾರ ₹ 22 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ₹ 50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಇಲ್ಲಿ ರಸ್ತೆಗಳ ನಿರ್ಮಾಣ ಕೈಗೊಳ್ಳಲಾಗಿದೆ. ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು’ ಎಂದರು.</p>.<p>‘ವಸತಿನಿಲಯದ ಕಟ್ಟಡಗಳನ್ನು ಖಾಲಿ ಜಾಗವಿದೆ ಎಂದು ಎಲ್ಲೆಂದರಲ್ಲಿ ನಿರ್ಮಿಸಬಾರದು. ದೂರಾಲೋಚನೆ ಇಲ್ಲದೆ ಕೆಲಸ ಮಾಡಿದರೆ ಮುಂದೆ ನಿರ್ಮಿಸಬೇಕಾದ ಕಟ್ಟಡಗಳಿಗೆ ಅಡಚಣೆ ಆಗುತ್ತದೆ. ಜವಾಬ್ದಾರಿಯಿಂದ ಉತ್ತಮ ಕಟ್ಟಡ ನಿರ್ಮಿಸಬೇಕು’ ಎಂದು ಸೂಚಿಸಿದರು.</p>.<p>ಮುಖಂಡ ವಿವೇಕಾನಂದ ಹಳಿಂಗಳಿ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಗುರಪ್ಪ ದಾಶ್ಯಾಳ, ತಾಲ್ಲೂಕು ಪಂಚಾಯ್ತಿ ಸದಸ್ಯ ಶ್ರೀಶೈಲ ಶೆಲ್ಲೆಪ್ಪಗೋಳ, ಎಇ ಗೌಡಪ್ಪ ಗೂಳಪ್ಪನವರ, ಎ.ಜಿ. ಮುಲ್ಲಾ ಇದ್ದರು.</p>.<p>ಕಾರ್ಯಕ್ರಮಕ್ಕೆಂದು ಹಾಕಿದ್ದ ಪೆಂಡಾಲ್, ಶಾಸಕರು ಬರುವುದಕ್ಕೆ 10 ನಿಮಿಷ ಮುಂಚೆ ಕುಸಿದು ಬಿದ್ದಿತು. ನಂತರ ಸರಿಪಡಿಸಲಾಯಿತು. ಮುಂಜಾಗ್ರತೆ ವಹಿಸದ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳ ಬಗ್ಗೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>