‘ರಾಮದುರ್ಗ ತಾಲ್ಲೂಕಿನ ಸೊಪ್ಪಡ್ಲ, ಓಬಳಾಪೂರ ಎಸ್ಎಲ್ಟಿ, ಓಬಳಾಪೂರ ಆರ್ಎಲ್ಟಿ, ಓಬಳಾಪೂರ ಗ್ರಾಮಗಳಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 2015-15ರಿಂದ 2019-20ರ ಅವಧಿಯಲ್ಲಿ ಕುಡಿಯುವ ನೀರು ಯೋಜನೆಗೆ ₹ 1 ಕೋಟಿಗೂ ಹೆಚ್ಚು ಅನುದಾನ ಮೀಸಲಿಡಲಾಗಿತ್ತು. ಆದರೆ, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಆಗಿಲ್ಲ. ಅಧಿಕಾರಿಗಳು ಗ್ರಾಮದ ಕೆಲವರೊಂದಿಗೆ ಸೇರಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಸೊಪ್ಪಡ್ಲ ಗ್ರಾಮ ಒಂದರಲ್ಲೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವುದಾಗಿ ದಾಖಲೆಯಲ್ಲಿ ತೋರಿಸಲಾಗಿದೆ. ಆದರೆ, ಅಲ್ಲಿನ ಜನರು ನೀರಿಗಾಗಿ ಪರಿತಪಿಸುವುದು ಇಂದಿಗೂ ತಪ್ಪಿಲ್ಲ’ ಎಂದು ಆರೋಪಿಸಿದ್ದಾರೆ.