<p><strong>ಸವದತ್ತಿ</strong>: ಇಲ್ಲಿನ ಸೌಗಂಧಿಪುರದಲ್ಲಿರುವ ಸಾಯಿಮಂದಿರದ 18 ನೇ ವಾರ್ಷಿಕೋತ್ಸವದ ಅಂಗವಾಗಿ ಮಂದಿರದಲ್ಲಿ ಪುಷ್ಪಗಳಿಂದ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು.</p>.<p>ಮಹಾಮೃತ್ಯುಂಜಯ ಹೋಮದೊಂದಿಗೆ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಸಾಯಿ ಬಾಬಾರರಿಗೆ ಕಾಕಡಾರತಿ, ಅಭಿಷೇಕ, ಸರ್ವಾಲಂಕಾರ ಪೂಜಾ ಕೈಂಕರ್ಯಗಳು ನಡೆದವು.</p>.<p>ತಾಲ್ಲೂಕಿನ ಅಸುಂಡಿ ಗ್ರಾಮದ ಗಡೇಕಾರ ಮನೆತನದಿಂದ ಸಾಯಿ ಮೂರ್ತಿಗೆ ಬೆಳ್ಳಿ ಕಿರೀಟ ಧಾರಣೆ ಮಾಡಲಾಯಿತು. ಸಾಯಿಭಜನಾ ಮಂಡಳಿಯವರಿಂದ ಬೆಳಿಗ್ಗೆಯಿಂದ ರಾತ್ರಿವರೆಗೂ ಭಜನೆ, ಭಕ್ತಿಗೀತೆ, ಸಾಯಿ ನಾಮ ಜಪ ನಡೆದವು.</p>.<p>ಮಹಿಳೆಯರಿಗೆ ಉಡಿ ತುಂಬಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಾಯಿ ಬಾಬಾರಿಗೆ ನೈವೇದ್ಯ, ಆರತಿ ಮಾಡಲಾಯಿತು. ಮಧ್ಯಾಹ್ನ ಭಕ್ತರಿಗೆ ಪ್ರಸಾದ ನಡೆದು ಸಂಜೆ ಆರತಿ, ಪಲ್ಲಕ್ಕಿ ಉತ್ಸವ ಹಾಗೂ ಶೇಜಾರತಿಯೊಂದಿಗೆ ಕಾರ್ಯಕ್ರಮ ಮಂಗಲವಾಯಿತು.</p>.<p>ಸಾಯಿ ಸದ್ಭಕ್ತ ಮಂಡಳಿಯ ಅಧ್ಯಕ್ಷ ಸಿ.ಬಿ.ನಾವದಗಿ, ಕಾರ್ಯಾಧ್ಯಕ್ಷ ಸಿ.ಜಿ. ತುರಮರಿ, ಬಿ.ಎಂ.ಯಲಿಗಾರ, ಡಾ.ಎನ್.ಸಿ. ಬೆಂಡಿಗೇರಿ, ಜೆ.ಎಸ್.ಶಿಂತ್ರಿ, ಜಿ.ಐ. ಹೀರೆಮಠ, ಎಸ್.ಎನ್. ಹೊನ್ನಬಿಂದಗಿ, ಎಸ್.ಬಿ.ಯಲ್ಲರಡ್ಡಿ, ಮಯೂರ ಕಾರದಗಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ</strong>: ಇಲ್ಲಿನ ಸೌಗಂಧಿಪುರದಲ್ಲಿರುವ ಸಾಯಿಮಂದಿರದ 18 ನೇ ವಾರ್ಷಿಕೋತ್ಸವದ ಅಂಗವಾಗಿ ಮಂದಿರದಲ್ಲಿ ಪುಷ್ಪಗಳಿಂದ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು.</p>.<p>ಮಹಾಮೃತ್ಯುಂಜಯ ಹೋಮದೊಂದಿಗೆ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಸಾಯಿ ಬಾಬಾರರಿಗೆ ಕಾಕಡಾರತಿ, ಅಭಿಷೇಕ, ಸರ್ವಾಲಂಕಾರ ಪೂಜಾ ಕೈಂಕರ್ಯಗಳು ನಡೆದವು.</p>.<p>ತಾಲ್ಲೂಕಿನ ಅಸುಂಡಿ ಗ್ರಾಮದ ಗಡೇಕಾರ ಮನೆತನದಿಂದ ಸಾಯಿ ಮೂರ್ತಿಗೆ ಬೆಳ್ಳಿ ಕಿರೀಟ ಧಾರಣೆ ಮಾಡಲಾಯಿತು. ಸಾಯಿಭಜನಾ ಮಂಡಳಿಯವರಿಂದ ಬೆಳಿಗ್ಗೆಯಿಂದ ರಾತ್ರಿವರೆಗೂ ಭಜನೆ, ಭಕ್ತಿಗೀತೆ, ಸಾಯಿ ನಾಮ ಜಪ ನಡೆದವು.</p>.<p>ಮಹಿಳೆಯರಿಗೆ ಉಡಿ ತುಂಬಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಾಯಿ ಬಾಬಾರಿಗೆ ನೈವೇದ್ಯ, ಆರತಿ ಮಾಡಲಾಯಿತು. ಮಧ್ಯಾಹ್ನ ಭಕ್ತರಿಗೆ ಪ್ರಸಾದ ನಡೆದು ಸಂಜೆ ಆರತಿ, ಪಲ್ಲಕ್ಕಿ ಉತ್ಸವ ಹಾಗೂ ಶೇಜಾರತಿಯೊಂದಿಗೆ ಕಾರ್ಯಕ್ರಮ ಮಂಗಲವಾಯಿತು.</p>.<p>ಸಾಯಿ ಸದ್ಭಕ್ತ ಮಂಡಳಿಯ ಅಧ್ಯಕ್ಷ ಸಿ.ಬಿ.ನಾವದಗಿ, ಕಾರ್ಯಾಧ್ಯಕ್ಷ ಸಿ.ಜಿ. ತುರಮರಿ, ಬಿ.ಎಂ.ಯಲಿಗಾರ, ಡಾ.ಎನ್.ಸಿ. ಬೆಂಡಿಗೇರಿ, ಜೆ.ಎಸ್.ಶಿಂತ್ರಿ, ಜಿ.ಐ. ಹೀರೆಮಠ, ಎಸ್.ಎನ್. ಹೊನ್ನಬಿಂದಗಿ, ಎಸ್.ಬಿ.ಯಲ್ಲರಡ್ಡಿ, ಮಯೂರ ಕಾರದಗಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>