ಬೆಳಗಾವಿ: ‘ಯುವಕರಲ್ಲಿ ದೇಶಭಕ್ತಿ, ಅದಮ್ಯ ಚೈತನ್ಯ, ತ್ಯಾಗ ಜೀವನ, ಪ್ರಾಮಾಣಿಕತೆ ಉತ್ತೇಜಿಸಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಫೂರ್ತಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಖಾನಾಪುರ ತಾಲ್ಲೂಕಿನ ನಂದಗಂಡದಲ್ಲಿ ನಿರ್ಮಿಸುತ್ತಿರುವ ವೀರಭೂಮಿಯು ದೇಶಕ್ಕೆ ಮಾದರಿಯಾಗಲಿ’ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಆಶಯ ವ್ಯಕ್ತಪಡಿಸಿದರು.