ಭಾನುವಾರ, ಮಾರ್ಚ್ 26, 2023
24 °C

ತಲ್ಲೂರ: ರಂಜಿಸಿದ ‘ಸಂಗ್ಯಾ ಬಾಳ್ಯಾ’ ಸಣ್ಣಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಲ್ಲೂರ: ‘ಗ್ರಾಮೀಣ ಕಲೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನಮ್ಮ ಕಲೆ, ಸಾಹಿತ್ಯ, ಸಂಗೀತ, ಜಾನಪದ ನಶಿಸದಂತೆ ನೋಡಿಕೊಳ್ಳಬೇಕು’ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸವರಾಜ ಕಡಬಿ ಹೇಳಿದರು.

ಗ್ರಾಮದ ಪೇಟೆ ಸಭಾಭವನದಲ್ಲಿ ಮಂಗಳವಾರ ರಾತ್ರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮದ್ಲೂರ ಗ್ರಾಮದ ಸಿದ್ದೇಶ್ವರ ಜಾನಪದ ರಂಗ ಕಲಾವಿದರು ನಡೆಸಿಕೊಟ್ಟ ‘ಸಂಗ್ಯಾ ಬಾಳ್ಯಾ’ ಸಣ್ಣಾಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಲೆಗಳನ್ನು ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ಸರ್ಕಾರದಿಂದ ಸಹಕಾರ ಕೊಡುತ್ತಿರುವುದು ಶ್ಲಾಘನೀಯ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಸದಸ್ಯ ಶ್ರೀಮಂತ ಪ್ರಪುಲಚಂದ್ರ ದೇಸಾಯಿ, ‘ಪೌರಾಣಿಕ, ಸಾಮಾಜಿಕ ನಾಟಕಗಳು ಸಮಾಜದಲ್ಲಿ ಬದಲಾವಣೆ ತರುತ್ತವೆ. ಆದರೆ, ಪ್ರಸ್ತುತ ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಭರಾಟೆಯಿಂದಾಗಿ ನಾಟಕಗಳನ್ನು ನೋಡುವವರ ಸಂಖ್ಯೆ ಕ್ಷೀಣಿಸುತ್ತಿದೆ’ ಎಂದು ವಿಷಾದಿಸಿದರು.

ಕಾರ್ಯಕ್ರಮ ಜನರನ್ನು ರಂಜಿಸಿತು.

ತೋರಗಲ್ಲ ಮಠದ ದೀಪಕ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ಶಂಕರಗೌಡ ಪಾಟೀಲ, ಐ.ಎಸ್. ಚಿಕಾಕಿ, ಸುಭಾನಿ ಕುದರಿ, ಬಸವರಾಜ ಕಟ್ಟೀಮನಿ, ಅಶೋಕ ದುಂಡನಕೊಪ್ಪ, ವಿನಯ ಕರಿಕಟ್ಟಿ, ಈರಪ್ಪ ಬೆನಕಟ್ಟಿ, ಶಿವಪ್ಪ ನಡವಿನಮನಿ, ಗೋಪಾಲ ವನ್ನೂರ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು