‘ಈ ಚುನಾವಣೆಯಲ್ಲಿ ಶಿವಸೇನಾ ಹಾಗೂ ಎಂಇಎಸ್ನಿಂದ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಿದ್ದೇವೆ. ಅಭ್ಯರ್ಥಿಗೆ ಶಕ್ತಿ ತುಂಬುವುದು ನಮ್ಮ ಕರ್ತವ್ಯ. ಇದಕ್ಕಾಗಿ ಇಲ್ಲಿಗೆ ಬಂದಿದ್ದೇನೆ. ಮಹಾರಾಷ್ಟ್ರದಲ್ಲಿ ಕುಳಿತು ಮಾತನಾಡುವುದಿಲ್ಲ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚನೆ ಹಿನ್ನೆಲೆಯಲ್ಲಿ ಎಂಇಎಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ನೀಡಿದ್ದೇವೆ. ನಮ್ಮ ಅಭ್ಯರ್ಥಿ 50ಸಾವಿರ ಮತ ಪಡೆಯುವುದು ಕೂಡ ಅನುಮಾನ ಎನ್ನುವ ಸ್ಥಿತಿ ಇತ್ತು. ಆದರೆ, ಈಗ ಗೆಲ್ಲುವ ಸಾಧ್ಯತೆ ಇದೆ. ಕಾಂಗ್ರೆಸ್ ಮತ್ತು ಬಿಜೆಪಿಯವರು ಹೆಚ್ಚಿನ ಶಕ್ತಿ ಉಪಯೋಗ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿ ಪ್ರಬಲ ಪೈಪೋಟಿ ಕೊಡುತ್ತಿದ್ದಾರೆ. ಈ ಚುನಾವಣೆ ಬಗ್ಗೆ ಮಹಾರಾಷ್ಟ್ರ ನಿರೀಕ್ಷೆ ಬಹಳ ಇದೆ’ ಎಂದು ತಿಳಿಸಿದರು.