<p><strong>ಸಂಕೇಶ್ವರ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ‘ಅಮೃತ್ ಮಿತ್ರ 2.0’ ಯೋಜನೆಯಡಿ, ಸ್ಥಳೀಯ ಹುಡ್ಕೊ ಕಾಲೊನಿಯ ಸಾರ್ವಜನಿಕ ಉದ್ಯಾನವನದ ಉಸ್ತುವಾರಿಯನ್ನು ಇಲ್ಲಿನ ಜ್ಞಾನ ದೀಪ ಮಹಿಳಾ ಸ್ವ-ಸಹಾಯ ಸಂಘಕ್ಕೆ ವಹಿಸಲಾಗಿದೆ. ಇದರಿಂದ ಮಹಿಳೆಯರ ಆರ್ಥಿಕ ಸಬಲೀಕರಣದ ಜೊತೆಗೆ ನಗರದ ಹಸಿರು ಸಂರಕ್ಷಣೆಗೂ ಹೊಸ ವೇದಿಕೆ ಲಭಿಸಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ ಹೇಳಿದರು.</p>.<p>ಪಟ್ಟಣದ ಹುಡ್ಕೊ ಕಾಲೊನಿಯ ಉದ್ಯಾನವನದಲ್ಲಿ ಸಸಿಗಳಿಗೆ ನೀರುಣಿಸುವ ಮೂಲಕ ಈ ವಿನೂತನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸಮುದಾಯ ಸಂಘಟನಾಧಿಕಾರಿ ಸಪ್ನಾ ಕುಡಬಾಳೆ, ಜ್ಞಾನ ದೀಪ ಸಂಘದ ಪ್ರಮುಖರಾದ ಮಾಧವೀ ಉಂಡಾಳೆ, ಅಂಬಿಕಾ ಸಂಸುದ್ದಿ ಸೇರಿದಂತೆ ಸಂಘದ ಸದಸ್ಯರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-21-1908422491</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಕೇಶ್ವರ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ‘ಅಮೃತ್ ಮಿತ್ರ 2.0’ ಯೋಜನೆಯಡಿ, ಸ್ಥಳೀಯ ಹುಡ್ಕೊ ಕಾಲೊನಿಯ ಸಾರ್ವಜನಿಕ ಉದ್ಯಾನವನದ ಉಸ್ತುವಾರಿಯನ್ನು ಇಲ್ಲಿನ ಜ್ಞಾನ ದೀಪ ಮಹಿಳಾ ಸ್ವ-ಸಹಾಯ ಸಂಘಕ್ಕೆ ವಹಿಸಲಾಗಿದೆ. ಇದರಿಂದ ಮಹಿಳೆಯರ ಆರ್ಥಿಕ ಸಬಲೀಕರಣದ ಜೊತೆಗೆ ನಗರದ ಹಸಿರು ಸಂರಕ್ಷಣೆಗೂ ಹೊಸ ವೇದಿಕೆ ಲಭಿಸಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ ಹೇಳಿದರು.</p>.<p>ಪಟ್ಟಣದ ಹುಡ್ಕೊ ಕಾಲೊನಿಯ ಉದ್ಯಾನವನದಲ್ಲಿ ಸಸಿಗಳಿಗೆ ನೀರುಣಿಸುವ ಮೂಲಕ ಈ ವಿನೂತನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸಮುದಾಯ ಸಂಘಟನಾಧಿಕಾರಿ ಸಪ್ನಾ ಕುಡಬಾಳೆ, ಜ್ಞಾನ ದೀಪ ಸಂಘದ ಪ್ರಮುಖರಾದ ಮಾಧವೀ ಉಂಡಾಳೆ, ಅಂಬಿಕಾ ಸಂಸುದ್ದಿ ಸೇರಿದಂತೆ ಸಂಘದ ಸದಸ್ಯರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-21-1908422491</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>