<p><strong>ಸಂಕೇಶ್ವರ:</strong> ಶಾಂತಿ ಹಾಗೂ ಸಾಮರಸ್ಯಕ್ಕೆ ಹೆಸರಾಗಿರುವ ಸಂಕೇಶ್ವರ ಪಟ್ಟಣದಲ್ಲಿ ಹಿಂದೂ– ಮುಸ್ಲಿಮರು ಪರಸ್ಪರ ಸಹಕಾರ ಮತ್ತು ಸೌಹಾರ್ದದಿಂದ ಬಕ್ರೀದ್ ಆಚರಿಸಬೇಕು ಎಂದು ಸಿಪಿಐ ಗಣಪತಿ ಕೊಂಗನೊಳ್ಳಿ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ನಿಮಿತ್ತ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಯಪ್ರಕಾಶ್ ಕರಜಗಿ ಹಾಗೂ ಮುಕ್ತಾರ ನಧಾಪ ಮಾತನಾಡಿ, ‘ಪಟ್ಟಣದ ಜನರು ಅನ್ಯೋನ್ಯವಾಗಿ ಬದುಕುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲು ಯತ್ನಿಸುವ ಕಿಡಿಗೇಡಿಗಳ ಬಗ್ಗೆ ಪೊಲೀಸರ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.</p>.<p>ಮುಖಂಡ ಗಜಾನನ ಕ್ವಳ್ಳಿ ಮಾತನಾಡಿದರು. ಪ್ರಮೋದ ಹೊಸಮನಿ, ಆನಂದ ಸಂಸುದ್ದಿ, ಹರುಣ ಮುಲ್ಲಾ, ದಸ್ತಗಿರಿ ತೇರಣಿ, ಅಲ್ತಾಪ ಶಾಯನ್ನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-21-1054395408</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಕೇಶ್ವರ:</strong> ಶಾಂತಿ ಹಾಗೂ ಸಾಮರಸ್ಯಕ್ಕೆ ಹೆಸರಾಗಿರುವ ಸಂಕೇಶ್ವರ ಪಟ್ಟಣದಲ್ಲಿ ಹಿಂದೂ– ಮುಸ್ಲಿಮರು ಪರಸ್ಪರ ಸಹಕಾರ ಮತ್ತು ಸೌಹಾರ್ದದಿಂದ ಬಕ್ರೀದ್ ಆಚರಿಸಬೇಕು ಎಂದು ಸಿಪಿಐ ಗಣಪತಿ ಕೊಂಗನೊಳ್ಳಿ ಹೇಳಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ನಿಮಿತ್ತ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಯಪ್ರಕಾಶ್ ಕರಜಗಿ ಹಾಗೂ ಮುಕ್ತಾರ ನಧಾಪ ಮಾತನಾಡಿ, ‘ಪಟ್ಟಣದ ಜನರು ಅನ್ಯೋನ್ಯವಾಗಿ ಬದುಕುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲು ಯತ್ನಿಸುವ ಕಿಡಿಗೇಡಿಗಳ ಬಗ್ಗೆ ಪೊಲೀಸರ ಗಮನಕ್ಕೆ ತರಲಾಗುವುದು’ ಎಂದು ಹೇಳಿದರು.</p>.<p>ಮುಖಂಡ ಗಜಾನನ ಕ್ವಳ್ಳಿ ಮಾತನಾಡಿದರು. ಪ್ರಮೋದ ಹೊಸಮನಿ, ಆನಂದ ಸಂಸುದ್ದಿ, ಹರುಣ ಮುಲ್ಲಾ, ದಸ್ತಗಿರಿ ತೇರಣಿ, ಅಲ್ತಾಪ ಶಾಯನ್ನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-21-1054395408</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>