<p>ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ‘ಸಂಕೇಶ್ವರ ಬಂದ್’ ಕರೆಗೆ ಉತ್ತಮ ಸ್ಪಂದನೆ ದೊರೆಯಿತು.</p>.<p>ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ– ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು. ಪರಿಣಾಮವಾಗಿ ಇಡೀ ದಿನ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡವು.</p>.<p>ಸಾರ್ವಜನಿಕರ ಹಿತದೃಷ್ಟಿಯಿಂದ ಮೆಡಿಕಲ್, ಹಾಲಿನ ಅಂಗಡಿ ಹಾಗೂ ಬೇಕರಿಗಳಂತಹ ಅಗತ್ಯ ಸೇವೆಗಳ ವಹಿವಾಟಿಗೆ ಯಾವುದೇ ಅಡ್ಡಿಯಿರಲಿಲ್ಲ. ಇವುಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ– ವಹಿವಾಟುಗಳು ಬಂದ್ ಆಗಿದ್ದವು. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರ ಸಕಾರಾತ್ಮಕ ಸಹಕಾರದಿಂದಾಗಿ ಇಡೀ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-691869555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ‘ಸಂಕೇಶ್ವರ ಬಂದ್’ ಕರೆಗೆ ಉತ್ತಮ ಸ್ಪಂದನೆ ದೊರೆಯಿತು.</p>.<p>ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ– ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು. ಪರಿಣಾಮವಾಗಿ ಇಡೀ ದಿನ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡವು.</p>.<p>ಸಾರ್ವಜನಿಕರ ಹಿತದೃಷ್ಟಿಯಿಂದ ಮೆಡಿಕಲ್, ಹಾಲಿನ ಅಂಗಡಿ ಹಾಗೂ ಬೇಕರಿಗಳಂತಹ ಅಗತ್ಯ ಸೇವೆಗಳ ವಹಿವಾಟಿಗೆ ಯಾವುದೇ ಅಡ್ಡಿಯಿರಲಿಲ್ಲ. ಇವುಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ– ವಹಿವಾಟುಗಳು ಬಂದ್ ಆಗಿದ್ದವು. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರ ಸಕಾರಾತ್ಮಕ ಸಹಕಾರದಿಂದಾಗಿ ಇಡೀ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-21-691869555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>