<p><strong>ಅಥಣಿ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಮುರಗುಂಡಿ ಗ್ರಾಮದ ಬಳಿ ಸಂಕೇಶ್ವರ– ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರು ನಡುವೆ ಭಾನುವಾರ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.</p><p>ಕಲಬುರಗಿ ಜಿಲ್ಲೆಯ ಅಫಜಲಪುರದ ರಾಹುಲ್ ಗೌರಿಶಂಕರ ಮ್ಯಾಳೇಶಿ (30), ಸಂಗಮನಾಥ ಗಿರೀಶ ಅಮರಗೊಂಡ (31) ಕಾರು ಚಾಲಕ ಗಿರೀಶ ಅಶೋಕ ಬಳೂರ್ಗಿ (30) ಮತ್ತು ರಾಧಿಕಾ ರಾಹುಲ್ ಮ್ಯಾಳೇಶಿ (28) ಮೃತರು. ಕಾರಿನಲ್ಲಿದ್ದ ಮಹೇಶ ತಿವಾರಿ ಎಂಬುವರಿಗೆ ಗಾಯಗಳಾಗಿವೆ.</p><p>‘ಕಾರಿನಲ್ಲಿದ್ದವರು ಮಹಾರಾಷ್ಟ್ರದ ಕೊಲ್ಹಾಪುರದ ಮಹಾಲಕ್ಷ್ಮಿದೇವಿಯ ದರ್ಶನ ಪಡೆದು ಮರಳುತ್ತಿದ್ದರು. ಬಸ್, ಅಥಣಿ ಕಡೆಯಿಂದ ಕಾಗವಾಡ ಮಾರ್ಗವಾಗಿ ಮೀರಜ್ಗೆ ಹೊರಟಿತ್ತು’ ಎಂದು ಅಥಣಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ (ಬೆಳಗಾವಿ ಜಿಲ್ಲೆ):</strong> ತಾಲ್ಲೂಕಿನ ಮುರಗುಂಡಿ ಗ್ರಾಮದ ಬಳಿ ಸಂಕೇಶ್ವರ– ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರು ನಡುವೆ ಭಾನುವಾರ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.</p><p>ಕಲಬುರಗಿ ಜಿಲ್ಲೆಯ ಅಫಜಲಪುರದ ರಾಹುಲ್ ಗೌರಿಶಂಕರ ಮ್ಯಾಳೇಶಿ (30), ಸಂಗಮನಾಥ ಗಿರೀಶ ಅಮರಗೊಂಡ (31) ಕಾರು ಚಾಲಕ ಗಿರೀಶ ಅಶೋಕ ಬಳೂರ್ಗಿ (30) ಮತ್ತು ರಾಧಿಕಾ ರಾಹುಲ್ ಮ್ಯಾಳೇಶಿ (28) ಮೃತರು. ಕಾರಿನಲ್ಲಿದ್ದ ಮಹೇಶ ತಿವಾರಿ ಎಂಬುವರಿಗೆ ಗಾಯಗಳಾಗಿವೆ.</p><p>‘ಕಾರಿನಲ್ಲಿದ್ದವರು ಮಹಾರಾಷ್ಟ್ರದ ಕೊಲ್ಹಾಪುರದ ಮಹಾಲಕ್ಷ್ಮಿದೇವಿಯ ದರ್ಶನ ಪಡೆದು ಮರಳುತ್ತಿದ್ದರು. ಬಸ್, ಅಥಣಿ ಕಡೆಯಿಂದ ಕಾಗವಾಡ ಮಾರ್ಗವಾಗಿ ಮೀರಜ್ಗೆ ಹೊರಟಿತ್ತು’ ಎಂದು ಅಥಣಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>