<p><strong>ಬೆಳಗಾವಿ:</strong> ತಾಲ್ಲೂಕಿನ ಸಂತಿ ಬಸ್ತವಾಡದಲ್ಲಿ ಕುರಾನ್ ಮತ್ತು ಹದೀಸ್ಗಳನ್ನು ಸುಟ್ಟ ಪ್ರಕರಣದಲ್ಲಿ ಪೊಲೀಸರು ವಿನಾಕಾರಣ ಹಿಂದೂಗಳಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ನಗರದಲ್ಲಿ ಬುಧವಾರ ‘ಹಿಂದೂ ಜನಾಕ್ರೋಶ ಯಾತ್ರೆ’ ನಡೆಸಿದರು.</p>.<p>ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಂಚಾರ ತಡೆದರು. ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕುರಾನ್ ಸುಟ್ಟ ಪ್ರಕರಣದಲ್ಲಿ ವಿನಾಕಾರಣ ಹಿಂದೂಗಳನ್ನು ಗುರಿ ಮಾಡಲಾಗುತ್ತಿದೆ. ಹಿಂದೂಗಳು ಕುರಾನ್ ಸುಡುವಂಥ ಕೆಟ್ಟ ಕೆಲಸ ಮಾಡುವುದಿಲ್ಲ. ಬರೀ ಹಿಂದೂಗಳನ್ನೇ ಏಕೆ ಗುರಿ ಮಾಡುತ್ತಿದ್ದೀರಿ’ ಎಂದೂ ಪ್ರಶ್ನಿಸಿದರು.</p>.<p>‘ಮಸೀದಿಯಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ಯಾವ ಕಾರಣಕ್ಕೆ ತೆಗೆದಿದ್ದಾರೆ? ಘಟನೆ ನಡೆದಾಗ ಮಸೀದಿ ಬೀಗ ಯಾರು ತೆಗೆದಿದ್ದಾರೆ? ಧರ್ಮಗುರು (ಮೌಲಾನಾ) ಮಸೀದಿ ಬಿಟ್ಟು, ಅನುಮಾನಾಸ್ಪದವಾಗಿ ಊರಿಗೆ ಹೋಗಿದ್ದು ಏಕೆ?’ ಎಂದು ಪ್ರಶ್ನಿಸಿದರು.</p>.<p>ಮಾಜಿ ಶಾಸಕ ಸಂಜಯ ಪಾಟೀಲ, ಮುಖಂಡರಾದ ಧನಂಜಯ ಜಾಧವ, ಕೃಷ್ಣಭಟ್, ಪ್ರಸಾದ ಸಡೇಕರ, ಪವನ ನಾಯಕ, ಜ್ಯೋತಿಬಾ ಪಾಟೀಲ, ಬಾಬಾಜಿ ಪಾವಸೆ, ನಾಗೇಂದ್ರ ನಾಯಕ, ರಾಮಾ ಪಾಟೀಲ, ಅಜಯ ಚನ್ನಿಕುಪ್ಪಿ, ವಿಠ್ಠಲ ಅಂಕಲಗಿ, ಗಂಗಾರಾಮ ಗುರುವ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಸಂತಿ ಬಸ್ತವಾಡದಲ್ಲಿ ಕುರಾನ್ ಮತ್ತು ಹದೀಸ್ಗಳನ್ನು ಸುಟ್ಟ ಪ್ರಕರಣದಲ್ಲಿ ಪೊಲೀಸರು ವಿನಾಕಾರಣ ಹಿಂದೂಗಳಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿ, ಗ್ರಾಮಸ್ಥರು ನಗರದಲ್ಲಿ ಬುಧವಾರ ‘ಹಿಂದೂ ಜನಾಕ್ರೋಶ ಯಾತ್ರೆ’ ನಡೆಸಿದರು.</p>.<p>ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಂಚಾರ ತಡೆದರು. ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕುರಾನ್ ಸುಟ್ಟ ಪ್ರಕರಣದಲ್ಲಿ ವಿನಾಕಾರಣ ಹಿಂದೂಗಳನ್ನು ಗುರಿ ಮಾಡಲಾಗುತ್ತಿದೆ. ಹಿಂದೂಗಳು ಕುರಾನ್ ಸುಡುವಂಥ ಕೆಟ್ಟ ಕೆಲಸ ಮಾಡುವುದಿಲ್ಲ. ಬರೀ ಹಿಂದೂಗಳನ್ನೇ ಏಕೆ ಗುರಿ ಮಾಡುತ್ತಿದ್ದೀರಿ’ ಎಂದೂ ಪ್ರಶ್ನಿಸಿದರು.</p>.<p>‘ಮಸೀದಿಯಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ಯಾವ ಕಾರಣಕ್ಕೆ ತೆಗೆದಿದ್ದಾರೆ? ಘಟನೆ ನಡೆದಾಗ ಮಸೀದಿ ಬೀಗ ಯಾರು ತೆಗೆದಿದ್ದಾರೆ? ಧರ್ಮಗುರು (ಮೌಲಾನಾ) ಮಸೀದಿ ಬಿಟ್ಟು, ಅನುಮಾನಾಸ್ಪದವಾಗಿ ಊರಿಗೆ ಹೋಗಿದ್ದು ಏಕೆ?’ ಎಂದು ಪ್ರಶ್ನಿಸಿದರು.</p>.<p>ಮಾಜಿ ಶಾಸಕ ಸಂಜಯ ಪಾಟೀಲ, ಮುಖಂಡರಾದ ಧನಂಜಯ ಜಾಧವ, ಕೃಷ್ಣಭಟ್, ಪ್ರಸಾದ ಸಡೇಕರ, ಪವನ ನಾಯಕ, ಜ್ಯೋತಿಬಾ ಪಾಟೀಲ, ಬಾಬಾಜಿ ಪಾವಸೆ, ನಾಗೇಂದ್ರ ನಾಯಕ, ರಾಮಾ ಪಾಟೀಲ, ಅಜಯ ಚನ್ನಿಕುಪ್ಪಿ, ವಿಠ್ಠಲ ಅಂಕಲಗಿ, ಗಂಗಾರಾಮ ಗುರುವ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>