ಹಿಂಡಲಗಾ ಗ್ರಾಮದಲ್ಲಿ ₹ ಕೋಟಿ ಮೊತ್ತದ ಕಾಮಗಾರಿ ನಿರ್ವಹಿಸಿದ್ದಾಗಿ ಸಂತೋಷ್ ಹೇಳಿಕೊಂಡಿದ್ದರು. ಉಡುಪಿ ಠಾಣೆ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ, ಇನ್ಸ್ಪೆಕ್ಟರ್ ಶರಣಗೌಡ ಪಾಟೀಲ ನೇತೃತ್ವದ ತಂಡವು ಕಾಮಗಾರಿಗಳ ಕುರಿತು ಅಧಿಕಾರಿಯಿಂದ ಮಾಹಿತಿ ಪಡೆಯಿತು. ಕಾರ್ಯಾದೇಶ ಪತ್ರವಿಲ್ಲದೆ ಕೆಲಸ ನಡೆಸುವುದಕ್ಕೆ ಅವಕಾಶ ಕೊಟ್ಟಿದ್ದು ಏಕೆ ಎಂಬಿತ್ಯಾದಿ ಪ್ರಶ್ನೆಗಳನ್ನು ಅಧಿಕಾರಿಗಳು ಕೇಳಿದರು. ‘ಕಾಮಗಾರಿ ವೇಳೆ ನಾನು ಇಲ್ಲಿರಲಿಲ್ಲ. ಕೆಲವು ತಿಂಗಳ ಹಿಂದೆಯಷ್ಟೆ ಬಂದಿದ್ದೇನೆ’ ಎಂದು ಪಿಡಿಒ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.