<p><strong>ಬೆಳಗಾವಿ: </strong>‘ವ್ಯಕ್ತಿಯ ವ್ಯಕ್ತಿತ್ವ ವಿಕಸನದಲ್ಲಿ ಪುಸ್ತಕಗಳ ಪಾತ್ರ ಹಿರಿದಾದುದು’ ಎಂದುಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಕೃಷ್ಣದೇವರಾಯ ವೃತ್ತ ಸಮೀಪ ಗುರುವಾರ ನಡೆದ ಸಪ್ನ ಬುಕ್ಹೌಸ್ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ಯುವಜನರಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪುಸ್ತಕಗಳಿಗೆ ಅಲೆಯುವ ಅಗತ್ಯವಿಲ್ಲ’ ಎಂದರು.</p>.<p>‘ಪುಸ್ತಕ ಮಾರುವುದೇ ಒಂದು ಹೋರಾಟ ಎಂಬ ದಿನಮಾನಗಳಲ್ಲಿ, ಆಧುನಿಕ ತಂತ್ರಜ್ಞಾನವನ್ನು ಸಪ್ನ ಬುಕ್ ಹೌಸ್ ಅಳವಡಿಸಿಕೊಂಡು ಮುನ್ನಡೆಯುತ್ತಿದೆ. ಗಡಿ ಜಿಲ್ಲೆಯಲ್ಲಿ ಶಾಖೆ ಆರಂಭಿಸಿರುವುದು ಸಂತಸ ತಂದಿದೆ’ ಎಂದರು.</p>.<p>ವಿಧಾನಪರಿಷತ್ ಮುಖ್ಯಸಚೇತನಕ ಮಹಾಂತೇಶ ಕವಟಗಿಮಠ ಮಾತನಾಡಿ, ‘ಪುಸ್ತಕಗಳು ವ್ಯಕ್ತಿಯನ್ನು ಸಮಾಜಮುಖಿ ನಾಗರಿಕನನ್ನಾಗಿ ಮಾಡುತ್ತವೆ. ಸುಸಂಸ್ಕೃತ ಸಮಾಜ ಹಾಗೂ ದೇಶ ಅಭಿವೃದ್ಧಿ ಹೊಂದಲು ಕಾರಣವಾಗಿವೆ’ ಎಂದು ಹೇಳಿದರು.</p>.<p>ಸಾಹಿತಿ ಸರಜೂ ಕಾಟ್ಕರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ ಮಾತನಾಡಿದರು.</p>.<p>ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ, ಕನ್ನಡ ಹೋರಾಟಗಾರ ಸಿದ್ದನಗೌಡ ಪಾಟೀಲ, ಸಾಹಿತಿಗಳಾದ ಡಾ.ಬಸವರಾಜ ಜಗಜಂಪಿ, ಜಿನದತ್ತ ದೇಸಾಯಿ, ಚಂದ್ರಕಾಂತ ಕುಸನೂರ ಇದ್ದರು.</p>.<p>ಡಾ.ಮೈತ್ರೀಯಿಣಿ ಗದಿಗೆಪ್ಪಗೌಡರ, ಆಶಾ ಯಮಕನಮರಡಿ ನಿರೂಪಿಸಿದರು. ಡಾ.ಆರ್. ದೊಡ್ಡೇಗೌಡ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ವ್ಯಕ್ತಿಯ ವ್ಯಕ್ತಿತ್ವ ವಿಕಸನದಲ್ಲಿ ಪುಸ್ತಕಗಳ ಪಾತ್ರ ಹಿರಿದಾದುದು’ ಎಂದುಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಕೃಷ್ಣದೇವರಾಯ ವೃತ್ತ ಸಮೀಪ ಗುರುವಾರ ನಡೆದ ಸಪ್ನ ಬುಕ್ಹೌಸ್ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ಯುವಜನರಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪುಸ್ತಕಗಳಿಗೆ ಅಲೆಯುವ ಅಗತ್ಯವಿಲ್ಲ’ ಎಂದರು.</p>.<p>‘ಪುಸ್ತಕ ಮಾರುವುದೇ ಒಂದು ಹೋರಾಟ ಎಂಬ ದಿನಮಾನಗಳಲ್ಲಿ, ಆಧುನಿಕ ತಂತ್ರಜ್ಞಾನವನ್ನು ಸಪ್ನ ಬುಕ್ ಹೌಸ್ ಅಳವಡಿಸಿಕೊಂಡು ಮುನ್ನಡೆಯುತ್ತಿದೆ. ಗಡಿ ಜಿಲ್ಲೆಯಲ್ಲಿ ಶಾಖೆ ಆರಂಭಿಸಿರುವುದು ಸಂತಸ ತಂದಿದೆ’ ಎಂದರು.</p>.<p>ವಿಧಾನಪರಿಷತ್ ಮುಖ್ಯಸಚೇತನಕ ಮಹಾಂತೇಶ ಕವಟಗಿಮಠ ಮಾತನಾಡಿ, ‘ಪುಸ್ತಕಗಳು ವ್ಯಕ್ತಿಯನ್ನು ಸಮಾಜಮುಖಿ ನಾಗರಿಕನನ್ನಾಗಿ ಮಾಡುತ್ತವೆ. ಸುಸಂಸ್ಕೃತ ಸಮಾಜ ಹಾಗೂ ದೇಶ ಅಭಿವೃದ್ಧಿ ಹೊಂದಲು ಕಾರಣವಾಗಿವೆ’ ಎಂದು ಹೇಳಿದರು.</p>.<p>ಸಾಹಿತಿ ಸರಜೂ ಕಾಟ್ಕರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ ಮಾತನಾಡಿದರು.</p>.<p>ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ, ಕನ್ನಡ ಹೋರಾಟಗಾರ ಸಿದ್ದನಗೌಡ ಪಾಟೀಲ, ಸಾಹಿತಿಗಳಾದ ಡಾ.ಬಸವರಾಜ ಜಗಜಂಪಿ, ಜಿನದತ್ತ ದೇಸಾಯಿ, ಚಂದ್ರಕಾಂತ ಕುಸನೂರ ಇದ್ದರು.</p>.<p>ಡಾ.ಮೈತ್ರೀಯಿಣಿ ಗದಿಗೆಪ್ಪಗೌಡರ, ಆಶಾ ಯಮಕನಮರಡಿ ನಿರೂಪಿಸಿದರು. ಡಾ.ಆರ್. ದೊಡ್ಡೇಗೌಡ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>