<p><strong>ಬೆಳಗಾವಿ</strong>: 'ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು </p><p>ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು' ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಧರಣಿ ಆರಂಭಿಸಿದ್ದಾರೆ.</p><p>ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, 'ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಆದ್ಯತೆ ಸಿಗಬೇಕು. ರಾಜ್ಯ ಸರ್ಕಾರ ರೂಪಿಸಿದ ಕಾನೂನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು' ಎಂದು ಒತ್ತಾಯಿಸಿದರು.</p><p>'ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ವಿಚಾರವಾಗಿ ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿದ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಸರ್ಕಾರದಿಂದ ಭೂಮಿ ಒದಗಿಸಿದ್ದರೆ ಹಿಂಪಡೆಯಬೇಕು. 15 ವರ್ಷಗಳಿಂದ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸಿ, ಅವರಿಗೆ ಕನ್ನಡ ಬರವಣಿಗೆ ಪರೀಕ್ಷೆ ಆಯೋಜಿಸಬೇಕು' ಎಂದು ಆಗ್ರಹಿಸಿದರು.</p><p>ಸಂಘಟನೆಯ ಸಂಚಾಲಕ ಮಹಾದೇವ ತಳವಾರ, ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೋಕಡೆ, ಸತೀಶ ಗುಡದವರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: 'ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು </p><p>ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು' ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಧರಣಿ ಆರಂಭಿಸಿದ್ದಾರೆ.</p><p>ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, 'ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಆದ್ಯತೆ ಸಿಗಬೇಕು. ರಾಜ್ಯ ಸರ್ಕಾರ ರೂಪಿಸಿದ ಕಾನೂನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು' ಎಂದು ಒತ್ತಾಯಿಸಿದರು.</p><p>'ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ವಿಚಾರವಾಗಿ ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿದ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಸರ್ಕಾರದಿಂದ ಭೂಮಿ ಒದಗಿಸಿದ್ದರೆ ಹಿಂಪಡೆಯಬೇಕು. 15 ವರ್ಷಗಳಿಂದ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸಿ, ಅವರಿಗೆ ಕನ್ನಡ ಬರವಣಿಗೆ ಪರೀಕ್ಷೆ ಆಯೋಜಿಸಬೇಕು' ಎಂದು ಆಗ್ರಹಿಸಿದರು.</p><p>ಸಂಘಟನೆಯ ಸಂಚಾಲಕ ಮಹಾದೇವ ತಳವಾರ, ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೋಕಡೆ, ಸತೀಶ ಗುಡದವರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>