<p><strong>ಗೋಕಾಕ:</strong> ‘ಎಂಇಎಸ್ ಮುಖಂಡ ಅರವಿಂದ ಪಾಟೀಲ ಅವರನ್ನು ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬೆಂಬಲಿಸಿ, ಮುಂದೆ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿರುವ ಬಿಜೆಪಿಯವರು ಈ ನಿಟ್ಟಿನಲ್ಲಿ ಹತ್ತು ಬಾರಿ ಯೋಚಿಸಿ ನಿರ್ಧಾರ ಕೈಗೊಳ್ಳಬೇಕು. ಕನ್ನಡಿಗರ ಹಿತಾಸಕ್ತಿ ವಿರುದ್ಧ ನಿರಂತರವಾಗಿ ತೊಡಗಿರುವವರನ್ನು ಬೆಂಬಲಿಸುವಾಗ ಎಚ್ಚರ ವಹಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆ ನಡೆಸುವವರಿಗೆ ರಾಷ್ಟ್ರೀಯ ಪಕ್ಷ ಬೆಂಬಲ ನೀಡುವುದು ಸಮಂಜಸವೇ?’ ಎಂದು ಕೇಳಿದರು.</p>.<p>‘ಈ ಹಿಂದೆ ಆ ಸಂಘಟನೆ ಕರ್ನಾಟಕ ಮತ್ತು ಕನ್ನಡ ಭಾಷೆ ಕುರಿತು ಪ್ರದರ್ಶಿಸಿರುವ ನಿಲುವನ್ನು ಪರಾಮರ್ಶಿಸುವ ಅಗತ್ಯವಿದೆ. ಕೇವಲ ರಾಜಕೀಯ ಉದ್ದೇಶಗಳ ಈಡೇರಿಕೆಗಾಗಿ, ನಮ್ಮನ್ನು ನಿಂದಿಸುವವರಿಗೆ ಮಣೆ ಹಾಕುವ ಪ್ರವೃತ್ತಿ ಅತ್ಯಂತ ಅಪ್ರಸ್ತುತ ಮತ್ತು ಅಪವಿತ್ರ’ ಎಂದು ಟೀಕಿಸಿದರು.</p>.<p>‘ಹೇಳುವುದೊಂದು ಮಾಡುವುದೊಂದು ಎನ್ನುವುದು ಬಿಜೆಪಿ ಸರ್ಕಾರಕ್ಕೆ ಹೊಸತೇನಲ್ಲ. ನೇಕಾರರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಭರವಸೆ ನೀಡಿ ಈಗ ನಿರ್ಧಾರ ಬದಲಿಸುವ ಮೂಲಕ ಸರ್ಕಾರ ಶ್ರಮಿಕರ ದಾರಿ ತಪ್ಪಿಸುತ್ತಿದೆ’ ಎಂದು ದೂರಿದರು.</p>.<p>‘ಸರ್ಕಾರದ ಭರವಸೆಯ ಮಾತುಗಳ ಹಿನ್ನೆಲೆಯಲ್ಲಿ ನೇಕಾರರು ಹೆಚ್ಚಿನ ಸೀರೆಗಳನ್ನು ಸಿದ್ಧಪಡಿಸಿದ್ದಾರೆ. ಆದರೆ, ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ ನೇಕಾರರ ಕನಸು ನುಚ್ಚು ನೂರಾಗಿದೆ. ಅವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ‘ಎಂಇಎಸ್ ಮುಖಂಡ ಅರವಿಂದ ಪಾಟೀಲ ಅವರನ್ನು ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬೆಂಬಲಿಸಿ, ಮುಂದೆ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿರುವ ಬಿಜೆಪಿಯವರು ಈ ನಿಟ್ಟಿನಲ್ಲಿ ಹತ್ತು ಬಾರಿ ಯೋಚಿಸಿ ನಿರ್ಧಾರ ಕೈಗೊಳ್ಳಬೇಕು. ಕನ್ನಡಿಗರ ಹಿತಾಸಕ್ತಿ ವಿರುದ್ಧ ನಿರಂತರವಾಗಿ ತೊಡಗಿರುವವರನ್ನು ಬೆಂಬಲಿಸುವಾಗ ಎಚ್ಚರ ವಹಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆ ನಡೆಸುವವರಿಗೆ ರಾಷ್ಟ್ರೀಯ ಪಕ್ಷ ಬೆಂಬಲ ನೀಡುವುದು ಸಮಂಜಸವೇ?’ ಎಂದು ಕೇಳಿದರು.</p>.<p>‘ಈ ಹಿಂದೆ ಆ ಸಂಘಟನೆ ಕರ್ನಾಟಕ ಮತ್ತು ಕನ್ನಡ ಭಾಷೆ ಕುರಿತು ಪ್ರದರ್ಶಿಸಿರುವ ನಿಲುವನ್ನು ಪರಾಮರ್ಶಿಸುವ ಅಗತ್ಯವಿದೆ. ಕೇವಲ ರಾಜಕೀಯ ಉದ್ದೇಶಗಳ ಈಡೇರಿಕೆಗಾಗಿ, ನಮ್ಮನ್ನು ನಿಂದಿಸುವವರಿಗೆ ಮಣೆ ಹಾಕುವ ಪ್ರವೃತ್ತಿ ಅತ್ಯಂತ ಅಪ್ರಸ್ತುತ ಮತ್ತು ಅಪವಿತ್ರ’ ಎಂದು ಟೀಕಿಸಿದರು.</p>.<p>‘ಹೇಳುವುದೊಂದು ಮಾಡುವುದೊಂದು ಎನ್ನುವುದು ಬಿಜೆಪಿ ಸರ್ಕಾರಕ್ಕೆ ಹೊಸತೇನಲ್ಲ. ನೇಕಾರರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಭರವಸೆ ನೀಡಿ ಈಗ ನಿರ್ಧಾರ ಬದಲಿಸುವ ಮೂಲಕ ಸರ್ಕಾರ ಶ್ರಮಿಕರ ದಾರಿ ತಪ್ಪಿಸುತ್ತಿದೆ’ ಎಂದು ದೂರಿದರು.</p>.<p>‘ಸರ್ಕಾರದ ಭರವಸೆಯ ಮಾತುಗಳ ಹಿನ್ನೆಲೆಯಲ್ಲಿ ನೇಕಾರರು ಹೆಚ್ಚಿನ ಸೀರೆಗಳನ್ನು ಸಿದ್ಧಪಡಿಸಿದ್ದಾರೆ. ಆದರೆ, ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ ನೇಕಾರರ ಕನಸು ನುಚ್ಚು ನೂರಾಗಿದೆ. ಅವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>