ಗೋಕಾಕ: ‘ಎಂಇಎಸ್ ಮುಖಂಡ ಅರವಿಂದ ಪಾಟೀಲ ಅವರನ್ನು ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬೆಂಬಲಿಸಿ, ಮುಂದೆ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿರುವ ಬಿಜೆಪಿಯವರು ಈ ನಿಟ್ಟಿನಲ್ಲಿ ಹತ್ತು ಬಾರಿ ಯೋಚಿಸಿ ನಿರ್ಧಾರ ಕೈಗೊಳ್ಳಬೇಕು. ಕನ್ನಡಿಗರ ಹಿತಾಸಕ್ತಿ ವಿರುದ್ಧ ನಿರಂತರವಾಗಿ ತೊಡಗಿರುವವರನ್ನು ಬೆಂಬಲಿಸುವಾಗ ಎಚ್ಚರ ವಹಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.