ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಿ.ಡಿ. ಕೇಸ್ ಬಗ್ಗೆ ಪೊಲೀಸರು ತನಿಖೆ ನಡೆಸಿ ಹೇಳುವವರೆಗೂ ನಾವು ಏನನ್ನೂ ಹೇಳಲಾಗುವುದಿಲ್ಲ. ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರಾಜ್ಯದ ಜನರೂ ಬೇಸತ್ತಿದ್ದಾರೆ. ದೃಶ್ಯ ಮಾಧ್ಯಮದಲ್ಲಿ ಬೇರೆ ಸುದ್ದಿಗಳೇ ಇಲ್ಲ. ಡಬಲ್ ಟ್ವಿಸ್ಟ್, ತ್ರಿಬಲ್ ಟ್ವಿಸ್ಟ್ ಎಂದು ತೋರುತ್ತಿದ್ದಾರೆ. ಈ ಪ್ರಕರಣಕ್ಕೆ ಆ ಯುವತಿಯ ಹೇಳಿಕೆ ಪ್ರಮುಖ. ಆದಷ್ಟು ಬೇಗ ಪೊಲೀಸರು ಯುವತಿ ಪತ್ತೆ ಹಚ್ಚಬೇಕು. ಸತ್ಯವನ್ನು ಜನರಿಗೆ ತಿಳಿಸಬೇಕು’ ಎಂದು ಆಗ್ರಹಿಸಿದರು.