ಗಂಗಾವತಿ (ಕೊಪ್ಪಳ ಜಿಲ್ಲೆ): ‘ಬೆಳಗಾವಿ ರಾಜಕಾರಣದಲ್ಲಿ ಯಾರ ನಡುವೆಯೂ ಸಮಸ್ಯೆಯಿಲ್ಲ. ಅಲ್ಲಿ ನಾನೇ ಹೆಡ್ ಆಫ್ ದ ಡಿಪಾರ್ಟ್ಮೆಂಟ್. ಹೀಗಾಗಿ ಯಾರ ಮೇಲೆಯೂ ಸಿಟ್ಟಾಗುವ ಪ್ರಸಂಗ ಬರುವುದಿಲ್ಲ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ತಾಲ್ಲೂಕಿನ ಆನೆಗೊಂದಿ ಗ್ರಾಮದಲ್ಲಿ ಭಾನುವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ವೇಳೆ ಮಾಧ್ಯಮದವರ ಜೊತೆ ಮಾತನಾಡಿ ‘ಬೆಳಗಾವಿಯಲ್ಲಿ ಎಲ್ಲವೂ ಸರಿಯಾಗಿದೆ. ನಾವು ಎಲ್ಲರೂ ಒಂದಾಗಿದ್ದೇವೆ’ ಎಂದರು.
‘ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಡತಗಳು ಕಳವಾಗಿರುವ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಿ ಕ್ರಮಕೈಗೊಳ್ಳುತ್ತಾರೆ’ ಎಂದರು.