ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶೆಟ್ಟರ್ ಅವರು ಹೇಳುತ್ತಿರುವ ಮಾತುಗಳಲ್ಲಿ ಸತ್ಯವಿದೆ. ಆದರೆ, ಮಾತನಾಡುವುದೇ ಸಾಧನೆಯಲ್ಲ. ಬಿಜೆಪಿಯವರು ಮಾತನಾಡುವುದನ್ನೇ ಸಾಧನೆ ಎಂದುಕೊಂಡಿದ್ದಾರೆ. ಅದು ನಿಜವೂ ಹೌದು, ಭಾಷಣ ಮಾಡುವುದರಲ್ಲಿ ಅವರು ನಿಸ್ಸೀಮರು’ ಎಂದು ಟಾಂಗ್ ಕೊಟ್ಟರು.