<p><strong>ಬೆಳಗಾವಿ: </strong>‘ಶಾಸಕರೂ ಆಗಿರುವ ಕಾಂಗ್ರೆಸ್ ಅಭ್ಯರ್ಥಿಯು ವಿಧಾನಮಂಡಲ ಅಧಿವೇಶನದಲ್ಲಿ ಧ್ವನಿ ಎತ್ತುವ ಕೆಲಸ ಮಾಡಿಲ್ಲ. ಇನ್ನು ಲೋಕಸಭೆಯಲ್ಲಿ ಏನು ಮಾಡುವರು?’ ಎಂಬ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿಕೆಗೆ ಸತೀಶ ಜಾರಕಿಹೊಳಿ ತಿರುಗೇಟು ನೀಡಿದರು.</p>.<p>ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶೆಟ್ಟರ್ ಅವರು ಹೇಳುತ್ತಿರುವ ಮಾತುಗಳಲ್ಲಿ ಸತ್ಯವಿದೆ. ಆದರೆ, ಮಾತನಾಡುವುದೇ ಸಾಧನೆಯಲ್ಲ. ಬಿಜೆಪಿಯವರು ಮಾತನಾಡುವುದನ್ನೇ ಸಾಧನೆ ಎಂದುಕೊಂಡಿದ್ದಾರೆ. ಅದು ನಿಜವೂ ಹೌದು, ಭಾಷಣ ಮಾಡುವುದರಲ್ಲಿ ಅವರು ನಿಸ್ಸೀಮರು’ ಎಂದು ಟಾಂಗ್ ಕೊಟ್ಟರು.</p>.<p>‘ವಿಧಾನಮಂಡಲ ಅಧಿವೇಶನದಲ್ಲಿ ಮೂರು ಗಂಟೆಯವರೆಗೂ ಮಾತನಾಡಿ ಮೂರು ಗ್ಲಾಸ್ ನೀರು ಕುಡಿಯುತ್ತಾರೆ. ಆದರೆ, ಅವರು ಸಾಮಾನ್ಯ ಜನರ ಸಮಸ್ಯೆ ಆಲಿಸುವುದನ್ನು ನಾನು ಕಂಡಿಲ್ಲ. ಅವರಂತೆ ಭಾಷಣ ಮಾಡದೆ ಅವರಿಗಿಂತ ಹೆಚ್ಚು ಕೆಲಸ ನಿರ್ವಹಿಸಿದ್ದೇನೆ. ಆ ತೃಪ್ತಿ ನನಗಿದೆ’ ಎಂದರು.</p>.<p>ಅರಬಾವಿ ಕ್ಷೇತ್ರದಲ್ಲಿ ಬಿಜೆಪಿ ಪರ ಬಾಲಚಂದ್ರ ಜಾರಕಿಹೊಳಿ ಪ್ರಚಾರ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅವರ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದಾರೆ. ಇದರಿಂದ ನಮಗೇನೂ ತೊಂದರೆ ಆಗುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಅಲ್ಲಿಯೂ ನಮ್ಮದೆ ಮತ ಬ್ಯಾಂಕ್ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಶಾಸಕರೂ ಆಗಿರುವ ಕಾಂಗ್ರೆಸ್ ಅಭ್ಯರ್ಥಿಯು ವಿಧಾನಮಂಡಲ ಅಧಿವೇಶನದಲ್ಲಿ ಧ್ವನಿ ಎತ್ತುವ ಕೆಲಸ ಮಾಡಿಲ್ಲ. ಇನ್ನು ಲೋಕಸಭೆಯಲ್ಲಿ ಏನು ಮಾಡುವರು?’ ಎಂಬ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿಕೆಗೆ ಸತೀಶ ಜಾರಕಿಹೊಳಿ ತಿರುಗೇಟು ನೀಡಿದರು.</p>.<p>ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶೆಟ್ಟರ್ ಅವರು ಹೇಳುತ್ತಿರುವ ಮಾತುಗಳಲ್ಲಿ ಸತ್ಯವಿದೆ. ಆದರೆ, ಮಾತನಾಡುವುದೇ ಸಾಧನೆಯಲ್ಲ. ಬಿಜೆಪಿಯವರು ಮಾತನಾಡುವುದನ್ನೇ ಸಾಧನೆ ಎಂದುಕೊಂಡಿದ್ದಾರೆ. ಅದು ನಿಜವೂ ಹೌದು, ಭಾಷಣ ಮಾಡುವುದರಲ್ಲಿ ಅವರು ನಿಸ್ಸೀಮರು’ ಎಂದು ಟಾಂಗ್ ಕೊಟ್ಟರು.</p>.<p>‘ವಿಧಾನಮಂಡಲ ಅಧಿವೇಶನದಲ್ಲಿ ಮೂರು ಗಂಟೆಯವರೆಗೂ ಮಾತನಾಡಿ ಮೂರು ಗ್ಲಾಸ್ ನೀರು ಕುಡಿಯುತ್ತಾರೆ. ಆದರೆ, ಅವರು ಸಾಮಾನ್ಯ ಜನರ ಸಮಸ್ಯೆ ಆಲಿಸುವುದನ್ನು ನಾನು ಕಂಡಿಲ್ಲ. ಅವರಂತೆ ಭಾಷಣ ಮಾಡದೆ ಅವರಿಗಿಂತ ಹೆಚ್ಚು ಕೆಲಸ ನಿರ್ವಹಿಸಿದ್ದೇನೆ. ಆ ತೃಪ್ತಿ ನನಗಿದೆ’ ಎಂದರು.</p>.<p>ಅರಬಾವಿ ಕ್ಷೇತ್ರದಲ್ಲಿ ಬಿಜೆಪಿ ಪರ ಬಾಲಚಂದ್ರ ಜಾರಕಿಹೊಳಿ ಪ್ರಚಾರ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅವರ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದಾರೆ. ಇದರಿಂದ ನಮಗೇನೂ ತೊಂದರೆ ಆಗುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಅಲ್ಲಿಯೂ ನಮ್ಮದೆ ಮತ ಬ್ಯಾಂಕ್ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>