<p><strong>ಬೆಳಗಾವಿ:</strong> ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರು ಬಿಜೆಪಿಯ ಅಭಯ ಪಾಟೀಲ ಪ್ರತಿನಿಧಿಸುತ್ತಿರುವ ಇಲ್ಲಿನ ದಕ್ಷಿಣ ಮತಕ್ಷೇತ್ರದ ವಿವಿಧ ವಾರ್ಡ್ಗಳಿಗೆ ಶುಕ್ರವಾರ ಭೇಟಿ ನೀಡಿ, ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿದರು.</p>.<p>ಅನಗೋಳ, ನಾನಾವಾಡಿ, ಮಜಗಾವಿ ಮೊದಲಾದ ಬಡಾವಣೆಗಳಿಗೆ ಭೇಟಿ ನೀಡಿ, ಮುಖಂಡರು ಹಾಗೂ ಕಾರ್ಯಕರ್ತರ ಮನೆಯಲ್ಲಿ ಕೆಲ ಹೊತ್ತು ಚರ್ಚಿಸಿದರು.</p>.<p>ಈ ವೇಳೆ ಮಾತನಾಡಿ, ‘ಮುಂದಿನ ದಿನಗಳಲ್ಲಿ ದಕ್ಷಿಣ ಮತಕ್ಷೇತ್ರದ ಎಲ್ಲ ವಾರ್ಡ್ಗಳಿಗೂ ಭೇಟಿ ನೀಡುತ್ತೇನೆ. ಪಾಲಿಕೆ ಚುನಾವಣೆಯಲ್ಲಿ ನಾವು ಸೋತರೂ ಜನರೊಂದಿಗೆ ಇದ್ದೇವೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಪಾಲಿಕೆ ಚುನಾವಣೆಯಲ್ಲಿ ದಕ್ಷಿಣ ಮತಕ್ಷೇತ್ರದಲ್ಲಿ ನಮಗೆ ಹೆಚ್ಚಿನ ಸ್ಥಾನಗಳು ಬರಬೇಕಾಗಿತ್ತು. ಆದರೆ, ಎಂಇಎಸ್ ಒಳಜಗಳದಿಂದ ಬಿಜೆಪಿಯವರಿಗೆ ಲಾಭವಾಯಿತು. ಮುಂದೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಕಾರ್ಯಕರ್ತರೆಲ್ಲ ಒಗ್ಗಟ್ಟಾಗಿರಬೇಕು’ ಎಂದರು.</p>.<p>ನಾನಾವಾಡಿ ಮದರಸಾಕ್ಕೆ ಭೇಟಿ ನೀಡಿದರು. ಸ್ಥಳೀಯರಾದ ಅರ್ಚನಾ ಮೇಸ್ತ್ರಿ, ಲತೀಫ್ ಫೀರಜಾದೆ, ಕುರ್ಸಿದ್ ಮುಲ್ಲಾ, ಚೋಗ್ರಾ ಮೊಮಿನ್ ಆನಿಗೋಳ, ಶಂಕರ ಬರಮನ್ನವರ, ರಾಘವೇಂದ್ರ ಲೋಕರಿ, ಈರಪ್ಪ ತಿಗಡಿ, ಸರಳಾ ಸಾತಪುತೆ ಸೇರಿದಂತೆ ಮುಖಂಡರ ಮನೆಗೆ ಭೇಟಿ ಕೊಟ್ಟರು.</p>.<p>ತಮ್ಮನ್ನು ಭೇಟಿಯಾಗಬೇಕು ಎಂಬ ರೇಣುಕಾನಗರದ ಅಭಿಮಾನಿ ಗಣಪತಿ ಅಶೋಕ ಸೊಂಟಕ್ಕಿ (ವಿಶೇಷ ವ್ಯಕ್ತಿ) ಬಯಕೆಯನ್ನು ಈಡೇರಿಸಿದರು. ಅವರೊಂದಿಗೆ ಆತ್ಮೀಯವಾಗಿ ಮಾತನಾಡಿದರು.</p>.<p>ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ದಕ್ಷಿಣ ಮತಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಜ್ಜಪ್ಪ ಡಗೆ, ಮುಖಂಡರಾದ ಪರಶುರಾಮ ಡಗೆ, ಫಜಲ ಮಕಾನದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರು ಬಿಜೆಪಿಯ ಅಭಯ ಪಾಟೀಲ ಪ್ರತಿನಿಧಿಸುತ್ತಿರುವ ಇಲ್ಲಿನ ದಕ್ಷಿಣ ಮತಕ್ಷೇತ್ರದ ವಿವಿಧ ವಾರ್ಡ್ಗಳಿಗೆ ಶುಕ್ರವಾರ ಭೇಟಿ ನೀಡಿ, ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿದರು.</p>.<p>ಅನಗೋಳ, ನಾನಾವಾಡಿ, ಮಜಗಾವಿ ಮೊದಲಾದ ಬಡಾವಣೆಗಳಿಗೆ ಭೇಟಿ ನೀಡಿ, ಮುಖಂಡರು ಹಾಗೂ ಕಾರ್ಯಕರ್ತರ ಮನೆಯಲ್ಲಿ ಕೆಲ ಹೊತ್ತು ಚರ್ಚಿಸಿದರು.</p>.<p>ಈ ವೇಳೆ ಮಾತನಾಡಿ, ‘ಮುಂದಿನ ದಿನಗಳಲ್ಲಿ ದಕ್ಷಿಣ ಮತಕ್ಷೇತ್ರದ ಎಲ್ಲ ವಾರ್ಡ್ಗಳಿಗೂ ಭೇಟಿ ನೀಡುತ್ತೇನೆ. ಪಾಲಿಕೆ ಚುನಾವಣೆಯಲ್ಲಿ ನಾವು ಸೋತರೂ ಜನರೊಂದಿಗೆ ಇದ್ದೇವೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಪಾಲಿಕೆ ಚುನಾವಣೆಯಲ್ಲಿ ದಕ್ಷಿಣ ಮತಕ್ಷೇತ್ರದಲ್ಲಿ ನಮಗೆ ಹೆಚ್ಚಿನ ಸ್ಥಾನಗಳು ಬರಬೇಕಾಗಿತ್ತು. ಆದರೆ, ಎಂಇಎಸ್ ಒಳಜಗಳದಿಂದ ಬಿಜೆಪಿಯವರಿಗೆ ಲಾಭವಾಯಿತು. ಮುಂದೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಕಾರ್ಯಕರ್ತರೆಲ್ಲ ಒಗ್ಗಟ್ಟಾಗಿರಬೇಕು’ ಎಂದರು.</p>.<p>ನಾನಾವಾಡಿ ಮದರಸಾಕ್ಕೆ ಭೇಟಿ ನೀಡಿದರು. ಸ್ಥಳೀಯರಾದ ಅರ್ಚನಾ ಮೇಸ್ತ್ರಿ, ಲತೀಫ್ ಫೀರಜಾದೆ, ಕುರ್ಸಿದ್ ಮುಲ್ಲಾ, ಚೋಗ್ರಾ ಮೊಮಿನ್ ಆನಿಗೋಳ, ಶಂಕರ ಬರಮನ್ನವರ, ರಾಘವೇಂದ್ರ ಲೋಕರಿ, ಈರಪ್ಪ ತಿಗಡಿ, ಸರಳಾ ಸಾತಪುತೆ ಸೇರಿದಂತೆ ಮುಖಂಡರ ಮನೆಗೆ ಭೇಟಿ ಕೊಟ್ಟರು.</p>.<p>ತಮ್ಮನ್ನು ಭೇಟಿಯಾಗಬೇಕು ಎಂಬ ರೇಣುಕಾನಗರದ ಅಭಿಮಾನಿ ಗಣಪತಿ ಅಶೋಕ ಸೊಂಟಕ್ಕಿ (ವಿಶೇಷ ವ್ಯಕ್ತಿ) ಬಯಕೆಯನ್ನು ಈಡೇರಿಸಿದರು. ಅವರೊಂದಿಗೆ ಆತ್ಮೀಯವಾಗಿ ಮಾತನಾಡಿದರು.</p>.<p>ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ದಕ್ಷಿಣ ಮತಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಜ್ಜಪ್ಪ ಡಗೆ, ಮುಖಂಡರಾದ ಪರಶುರಾಮ ಡಗೆ, ಫಜಲ ಮಕಾನದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>