<p><strong>ಬೆಳಗಾವಿ:</strong> ‘ಎಲ್ಲ ಪಕ್ಷಗಳಲ್ಲೂ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ. ಬಿಜೆಪಿಯಲ್ಲೂ ಮೂರು ಗುಂಪುಗಳಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರತಿಯೊಬ್ಬ ನಾಯಕನಿಗೂ ಒಬ್ಬೊಬ್ಬರು ದೊಡ್ಡ ನಾಯಕರು ಇರುತ್ತಾರೆ. ಅವರೊಂದಿಗೆ ಗುರುತಿಸಿಕೊಂಡಿರುತ್ತಾರೆ. ಆದರೆ, ಪಕ್ಷವೆಂದು ಬಂದಾಗ ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಾರೆ’ ಎಂದರು.</p>.<p>‘ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಗೌರವ ಮತ್ತು ವರ್ಚಸ್ಸಿನ ಮೇಲೆ ಅವಲಂಬಿಸಿರುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳಿದ್ದವು. ಆದರೆ, ಕೊನೆ ಕ್ಷಣದಲ್ಲಿ ಸಮಸ್ಯೆಯಾಗಿದ್ದರಿಂದ ಡಾ.ಅಂಜಲಿ ನಿಂಬಾಳ್ಕರ್ ಸೋತರು’ ಎಂದು ಪ್ರತಿಕ್ರಿಯಿಸಿದರು.</p>.<p>‘ಡಿಸಿಸಿ ಬ್ಯಾಂಕ್ನಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಎಲ್ಲ ಪಕ್ಷದವರೂ ಸೇರಿ ಆಡಳಿತ ನಡೆಸುತ್ತಾರೆ. ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಹೊಸದನ್ನೇನೋ ಮಾಡಲು ಹೊರಟಿದ್ದಾರೆ. ಆದರೆ, ವಿಶೇಷವೇನೂ ಆಗುವುದಿಲ್ಲ’ ಎಂದರು.</p>.<p>‘ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬಂಧನದ ಹಿಂದೆ ರಾಜಕೀಯವಿದೆ. ಬಿಜೆಪಿಯವರು ಕಾಂಗ್ರೆಸ್ನವರನ್ನು ಟಾರ್ಗೆಟ್ ಮಾಡುತ್ತಲೇ ಇದ್ದಾರೆ. ಈ ವಿಚಾರವಾಗಿ ಆರೋಪ ಮಾಡುವುದರಿಂದ ಏನೂ ಪ್ರಯೋಜನವಿಲ್ಲ. ನ್ಯಾಯಾಲಯದಲ್ಲಿ ಏನು ತೀರ್ಪು ಬರುತ್ತದೆಯೋ ಅದೇ ಅಂತಿಮ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಎಲ್ಲ ಪಕ್ಷಗಳಲ್ಲೂ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ. ಬಿಜೆಪಿಯಲ್ಲೂ ಮೂರು ಗುಂಪುಗಳಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರತಿಯೊಬ್ಬ ನಾಯಕನಿಗೂ ಒಬ್ಬೊಬ್ಬರು ದೊಡ್ಡ ನಾಯಕರು ಇರುತ್ತಾರೆ. ಅವರೊಂದಿಗೆ ಗುರುತಿಸಿಕೊಂಡಿರುತ್ತಾರೆ. ಆದರೆ, ಪಕ್ಷವೆಂದು ಬಂದಾಗ ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಾರೆ’ ಎಂದರು.</p>.<p>‘ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಗೌರವ ಮತ್ತು ವರ್ಚಸ್ಸಿನ ಮೇಲೆ ಅವಲಂಬಿಸಿರುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳಿದ್ದವು. ಆದರೆ, ಕೊನೆ ಕ್ಷಣದಲ್ಲಿ ಸಮಸ್ಯೆಯಾಗಿದ್ದರಿಂದ ಡಾ.ಅಂಜಲಿ ನಿಂಬಾಳ್ಕರ್ ಸೋತರು’ ಎಂದು ಪ್ರತಿಕ್ರಿಯಿಸಿದರು.</p>.<p>‘ಡಿಸಿಸಿ ಬ್ಯಾಂಕ್ನಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಎಲ್ಲ ಪಕ್ಷದವರೂ ಸೇರಿ ಆಡಳಿತ ನಡೆಸುತ್ತಾರೆ. ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಹೊಸದನ್ನೇನೋ ಮಾಡಲು ಹೊರಟಿದ್ದಾರೆ. ಆದರೆ, ವಿಶೇಷವೇನೂ ಆಗುವುದಿಲ್ಲ’ ಎಂದರು.</p>.<p>‘ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬಂಧನದ ಹಿಂದೆ ರಾಜಕೀಯವಿದೆ. ಬಿಜೆಪಿಯವರು ಕಾಂಗ್ರೆಸ್ನವರನ್ನು ಟಾರ್ಗೆಟ್ ಮಾಡುತ್ತಲೇ ಇದ್ದಾರೆ. ಈ ವಿಚಾರವಾಗಿ ಆರೋಪ ಮಾಡುವುದರಿಂದ ಏನೂ ಪ್ರಯೋಜನವಿಲ್ಲ. ನ್ಯಾಯಾಲಯದಲ್ಲಿ ಏನು ತೀರ್ಪು ಬರುತ್ತದೆಯೋ ಅದೇ ಅಂತಿಮ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>