<p><strong>ಬೆಳಗಾವಿ:</strong> ‘ಖಾಲಿಯಿರುವ ಎರಡು ಸಚಿವ ಸ್ಥಾನಗಳನ್ನು ವಾಲ್ಮೀಕಿ ಸಮಾಜದವರಿಗೆ ನೀಡಲು ಕೋರಿ ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಉಳಿದ ಎರಡೂವರೆ ವರ್ಷ ಯಾರು ಮುಖ್ಯಮಂತ್ರಿ ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ ಎಂದು ಭಾವಿಸಿದ್ದೇನೆ. ಪಕ್ಷದ ಕೆಲವರಲ್ಲಿನ ಗೊಂದಲವನ್ನು ಹೈಕಮಾಂಡ್ ಸರಿಪಡಿಸಬೇಕು’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಶ್ನಾವಳಿ ಕುರಿತು ಪ್ರತಿಕ್ರಿಯಿಸಿದ ಅವರು, ‘ಹಲವಾರು ಪ್ರಶ್ನೆಗಳಿಗೆ ಉತ್ತರಿಸಲು ಜನರು ಹಿಂಜರಿಯುತ್ತಾರೆ. ಪ್ರಶ್ನೆಗಳನ್ನು ಕಡಿಮೆಗೊಳಿಸಿದರೆ ಒಳ್ಳೆಯದು’ ಎಂದರು.</p>.<p>ಹುಬ್ಬಳ್ಳಿಯಲ್ಲಿ ಮಾತನಾಡಿದವರು, ‘ಕಲ್ಯಾಣ ಕರ್ನಾಟಕದಂತೆ ಕಿತ್ತೂರು ಕರ್ನಾಟಕವು ಹಿಂದುಳಿದಿದೆ. ಈ ಭಾಗದಲ್ಲಿ 36 ಶಾಸಕರಿದ್ದಾರೆ. ಅವರಿಗೆ ನೀಡಿದಂತೆ ನಮಗೂ ಅನುದಾನ ಕೊಟ್ಟರೆ ಅಭಿವೃದ್ಧಿಗೆ ಅನುಕೂಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಖಾಲಿಯಿರುವ ಎರಡು ಸಚಿವ ಸ್ಥಾನಗಳನ್ನು ವಾಲ್ಮೀಕಿ ಸಮಾಜದವರಿಗೆ ನೀಡಲು ಕೋರಿ ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಉಳಿದ ಎರಡೂವರೆ ವರ್ಷ ಯಾರು ಮುಖ್ಯಮಂತ್ರಿ ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ ಎಂದು ಭಾವಿಸಿದ್ದೇನೆ. ಪಕ್ಷದ ಕೆಲವರಲ್ಲಿನ ಗೊಂದಲವನ್ನು ಹೈಕಮಾಂಡ್ ಸರಿಪಡಿಸಬೇಕು’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಶ್ನಾವಳಿ ಕುರಿತು ಪ್ರತಿಕ್ರಿಯಿಸಿದ ಅವರು, ‘ಹಲವಾರು ಪ್ರಶ್ನೆಗಳಿಗೆ ಉತ್ತರಿಸಲು ಜನರು ಹಿಂಜರಿಯುತ್ತಾರೆ. ಪ್ರಶ್ನೆಗಳನ್ನು ಕಡಿಮೆಗೊಳಿಸಿದರೆ ಒಳ್ಳೆಯದು’ ಎಂದರು.</p>.<p>ಹುಬ್ಬಳ್ಳಿಯಲ್ಲಿ ಮಾತನಾಡಿದವರು, ‘ಕಲ್ಯಾಣ ಕರ್ನಾಟಕದಂತೆ ಕಿತ್ತೂರು ಕರ್ನಾಟಕವು ಹಿಂದುಳಿದಿದೆ. ಈ ಭಾಗದಲ್ಲಿ 36 ಶಾಸಕರಿದ್ದಾರೆ. ಅವರಿಗೆ ನೀಡಿದಂತೆ ನಮಗೂ ಅನುದಾನ ಕೊಟ್ಟರೆ ಅಭಿವೃದ್ಧಿಗೆ ಅನುಕೂಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>