‘ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಎಲ್ಲಿಯೂ ಹೋಗಲ್ಲ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದಾರೆ. ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ. ನಮ್ಮ ಸರ್ಕಾರವಿದ್ದಾಗ ಮೂರು, ನಾಲ್ಕು ಜನ ಅಲ್ಪಸಂಖ್ಯಾತ ಸಮಾಜದವರೇ ಮಂತ್ರಿಗಳಾಗಿದ್ದರು. ನಾಮನಿರ್ದೇಶನ ಸಂದರ್ಭದಲ್ಲೂ ಆದ್ಯತೆ ಕೊಡಲಾಗಿದೆ’ ಎಂದು ಸ್ಪಷ್ಟಪಡಿಸಿದರು.