ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಗೆಲುವು ನಿಶ್ಚಿತ: ಸತೀಶ ಜಾರಕಿಹೊಳಿ

Last Updated 10 ಡಿಸೆಂಬರ್ 2021, 8:00 IST
ಅಕ್ಷರ ಗಾತ್ರ

ಬೆಳಗಾವಿ: ಈ ಬಾರಿ‌ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಜನರ ಮಧ್ಯೆ ಹಣಾಹಣಿ ನಡೆದಿದೆ. ಆದರೆ, ನಮ್ಮ ಬಳಿ ಗೆಲ್ಲುವಷ್ಟು ಸಂಖ್ಯಾಬಲವಿದೆ. ಎಲ್ಲರಿಗಿಂತ ಹೆಚ್ಚು ಮೊದಲ ಪ್ರಾಶಸ್ತ್ಯದ ಮತ ಪಡೆದು ಗೆಲ್ಲುತ್ತೇವೆ ಎಂದರು.

ಲಖನ್ ಜಾರಕಿಹೊಳಿ ಬಿಜೆಪಿ ಬಿ ಟೀಂ ಇದ್ದಂತೆ. ಬಿಜೆಪಿಯಲ್ಲಿ ಮಹಾಂತೇಶ ಕವಟಗಿಮಠ ಅಥವಾ ಲಖನ್ ಜಾರಕಿಹೊಳಿ ಇಬ್ಬರಲ್ಲಿ ಒಬ್ಬರು ಗೆಲ್ಲುತ್ತಾರೆ. ಕಳೆದ ಲೋಕಸಭಾ ಉಪ ಚುನಾವಣೆಗೆ ಹೋಲಿಸಿದರೆ, ಈ ಬಾರಿ ಬಹಳಷ್ಟು ಬದಲಾವಣೆಯಾಗಿದೆ. ಡಿ.14ರಂದು ಅದು ತಿಳಿಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT