<p><strong>ಬೆಳಗಾವಿ:</strong> ‘ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವುದಕ್ಕಾಗಿ ಬೆಳಗಾವಿ ತಾಲ್ಲೂಕು ವಿಭಜನೆಗೆ ಸರ್ಕಾರ ತೀರ್ಮಾನ ಕೈಗೊಂಡಿದೆ. ಹೊಸ ತಾಲ್ಲೂಕನ್ನು ಶೀಘ್ರ ಘೋಷಿಸಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ತಾಲೂಕು ಭೌಗೋಳಿಕವಾಗಿ ದೊಡ್ಡದಾಗಿದೆ. ಬೆಳಗಾವಿ ಉತ್ತರ, ದಕ್ಷಿಣ ಅಥವಾ ಗ್ರಾಮೀಣ ಪೈಕಿ, ಯಾವ ಕ್ಷೇತ್ರದಲ್ಲಾದರೂ ಹೊಸ ತಾಲ್ಲೂಕು ರಚನೆಯಾಗಬಹುದು. ಅದರ ವ್ಯಾಪ್ತಿಯನ್ನು ಕಂದಾಯ ಇಲಾಖೆ ಅಧಿಕಾರಿಗಳೇ ನಿರ್ಧರಿಸುತ್ತಾರೆ. ಈ ವೇಳೆ ಜನರ ಅನುಕೂಲತೆ ಪರಿಗಣಿಸಲಾಗುವುದು. ಎರಡೂ ತಾಲ್ಲೂಕು ನಗರಕ್ಕೆ ಹೊಂದಿಕೊಂಡೇ ಇರಲಿವೆ’ ಎಂದು ತಿಳಿಸಿದರು.</p><p>‘ಬೆಳಗಾವಿ ಜಿಲ್ಲಾ ವಿಭಜನೆಗೆ ಒತ್ತಡ ಇದ್ದೇ ಇದೆ. ಬೆಂಗಳೂರಿನಲ್ಲಿ ಈಚೆಗೆ ನಡೆದ ಪಕ್ಷದ ಶಾಸಕರ ಸಭೆಯಲ್ಲೂ ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಳ ರಚನೆ ವಿಚಾರ ಚರ್ಚೆಯಾಗಿದೆ. ಬೆಳಗಾವಿ ವಿಭಜಿಸುವಂತೆ ನಾವೂ ಆಗ್ರಹಿಸಿದ್ದೇವೆ. ಈ ಬಗ್ಗೆ ಸರ್ಕಾರ ಅಂತಿಮವಾಗಿ ನಿರ್ಧಾರ ಕೈಗೊಳ್ಳುತ್ತದೆ’ ಎಂದ ಅವರು, ‘ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.</p><p>‘ಬಿಜೆಪಿ ಸರ್ಕಾರದ ನೀತಿಗಳಿಂದಾಗಿ ರಾಜ್ಯದಲ್ಲಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ₹6,000 ಕೋಟಿ ಬಾಕಿ ಇದೆ. ಟೆಂಡರ್ ನಿಯಮಗಳ ಪ್ರಕಾರ ಒಂದು ಬಾರಿಗೆ ಮೂರನೇ ಒಂದು ಭಾಗದಷ್ಟು(ಶೇ.33) ಬಿಲ್ ಕೊಡಬೇಕಿದ್ದು, ಗುತ್ತಿಗೆದಾರರ ಬಾಕಿ ಪಾವತಿಗೆ ಎರಡರಿಂದ ಮೂರು ವರ್ಷ ಬೇಕಾಗುತ್ತದೆ. ಈ ಬಿಲ್ಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿಲ್ಲ. ಆದರೆ, ಬಿಲ್ ಕೊಡುವ ಮುನ್ನ ಕಾಮಗಾರಿಗಳನ್ನು ಪರಿಶೀಲಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಬೆಳಗಾವಿ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರ ಹೆಚ್ಚುವರಿಯಾಗಿ ₹70 ಕೋಟಿ ಅನುದಾನ ಮಂಜೂರುಗೊಳಿಸಿದೆ. ಮುಂದಿನ ಆರು ತಿಂಗಳಲ್ಲಿ ಇದು ಕಾರ್ಯಾರಂಭ ಮಾಡುವ ನಿರೀಕ್ಷೆ ಇದ್ದು, ವೈದ್ಯಕೀಯ ಸಲಕರಣೆ ಮತ್ತು ಸಿಬ್ಬಂದಿ ಒದಗಿಸಲಾಗುವುದು’ ಎಂದರು.</p><p>‘ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಸಿದ್ದ ಬಜೆಟ್ನ ಹಣವನ್ನು ಸರ್ಕಾರ ಬೇರೆಡೆ ತಿರುಗಿಸಿಲ್ಲ’ ಎಂದು ಸ್ಪಷ್ಟಪಡಿಸಿದ ಸತೀಶ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ ಬಜೆಟ್ನಲ್ಲಿ ರಾಜ್ಯದ ಸಂಪನ್ಮೂಲಗಳಿಂದ ₹40,000 ಕೋಟಿ ಹಣವನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಒದಗಿಸಿದ್ದಾರೆ’ ಎಂದು ತಿಳಿಸಿದರು.</p><p>ನಿಪ್ಪಾಣಿ ನಗರಸಭೆ ಮೇಲೆ ಎನ್ಸಿಪಿ ಬೆಂಬಲಿತ ಸದಸ್ಯರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸತೀಶ, ‘ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಹೊರತುಪಡಿಸಿದರೆ, ಬೇರೆ ಯಾವುದೇ ಧ್ವಜ ಹಾರಿಸಲು ಅವಕಾಶವಿಲ್ಲ. ಈ ಘಟನೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ರಾಷ್ಟ್ರಧ್ವಜ ಹಾರಿಸಿದ ನಂತರ ಭಗವಾ ಧ್ವಜ ಹಾರಿಸಲು ಯತ್ನಿಸಿದವರ ವಿರುದ್ಧ ಜಿಲ್ಲಾ ಪೊಲೀಸರು ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವುದಕ್ಕಾಗಿ ಬೆಳಗಾವಿ ತಾಲ್ಲೂಕು ವಿಭಜನೆಗೆ ಸರ್ಕಾರ ತೀರ್ಮಾನ ಕೈಗೊಂಡಿದೆ. ಹೊಸ ತಾಲ್ಲೂಕನ್ನು ಶೀಘ್ರ ಘೋಷಿಸಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ತಾಲೂಕು ಭೌಗೋಳಿಕವಾಗಿ ದೊಡ್ಡದಾಗಿದೆ. ಬೆಳಗಾವಿ ಉತ್ತರ, ದಕ್ಷಿಣ ಅಥವಾ ಗ್ರಾಮೀಣ ಪೈಕಿ, ಯಾವ ಕ್ಷೇತ್ರದಲ್ಲಾದರೂ ಹೊಸ ತಾಲ್ಲೂಕು ರಚನೆಯಾಗಬಹುದು. ಅದರ ವ್ಯಾಪ್ತಿಯನ್ನು ಕಂದಾಯ ಇಲಾಖೆ ಅಧಿಕಾರಿಗಳೇ ನಿರ್ಧರಿಸುತ್ತಾರೆ. ಈ ವೇಳೆ ಜನರ ಅನುಕೂಲತೆ ಪರಿಗಣಿಸಲಾಗುವುದು. ಎರಡೂ ತಾಲ್ಲೂಕು ನಗರಕ್ಕೆ ಹೊಂದಿಕೊಂಡೇ ಇರಲಿವೆ’ ಎಂದು ತಿಳಿಸಿದರು.</p><p>‘ಬೆಳಗಾವಿ ಜಿಲ್ಲಾ ವಿಭಜನೆಗೆ ಒತ್ತಡ ಇದ್ದೇ ಇದೆ. ಬೆಂಗಳೂರಿನಲ್ಲಿ ಈಚೆಗೆ ನಡೆದ ಪಕ್ಷದ ಶಾಸಕರ ಸಭೆಯಲ್ಲೂ ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಳ ರಚನೆ ವಿಚಾರ ಚರ್ಚೆಯಾಗಿದೆ. ಬೆಳಗಾವಿ ವಿಭಜಿಸುವಂತೆ ನಾವೂ ಆಗ್ರಹಿಸಿದ್ದೇವೆ. ಈ ಬಗ್ಗೆ ಸರ್ಕಾರ ಅಂತಿಮವಾಗಿ ನಿರ್ಧಾರ ಕೈಗೊಳ್ಳುತ್ತದೆ’ ಎಂದ ಅವರು, ‘ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.</p><p>‘ಬಿಜೆಪಿ ಸರ್ಕಾರದ ನೀತಿಗಳಿಂದಾಗಿ ರಾಜ್ಯದಲ್ಲಿ ಗುತ್ತಿಗೆದಾರರ ಬಿಲ್ ಬಾಕಿ ಉಳಿದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ₹6,000 ಕೋಟಿ ಬಾಕಿ ಇದೆ. ಟೆಂಡರ್ ನಿಯಮಗಳ ಪ್ರಕಾರ ಒಂದು ಬಾರಿಗೆ ಮೂರನೇ ಒಂದು ಭಾಗದಷ್ಟು(ಶೇ.33) ಬಿಲ್ ಕೊಡಬೇಕಿದ್ದು, ಗುತ್ತಿಗೆದಾರರ ಬಾಕಿ ಪಾವತಿಗೆ ಎರಡರಿಂದ ಮೂರು ವರ್ಷ ಬೇಕಾಗುತ್ತದೆ. ಈ ಬಿಲ್ಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿಲ್ಲ. ಆದರೆ, ಬಿಲ್ ಕೊಡುವ ಮುನ್ನ ಕಾಮಗಾರಿಗಳನ್ನು ಪರಿಶೀಲಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಬೆಳಗಾವಿ ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರ ಹೆಚ್ಚುವರಿಯಾಗಿ ₹70 ಕೋಟಿ ಅನುದಾನ ಮಂಜೂರುಗೊಳಿಸಿದೆ. ಮುಂದಿನ ಆರು ತಿಂಗಳಲ್ಲಿ ಇದು ಕಾರ್ಯಾರಂಭ ಮಾಡುವ ನಿರೀಕ್ಷೆ ಇದ್ದು, ವೈದ್ಯಕೀಯ ಸಲಕರಣೆ ಮತ್ತು ಸಿಬ್ಬಂದಿ ಒದಗಿಸಲಾಗುವುದು’ ಎಂದರು.</p><p>‘ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಸಿದ್ದ ಬಜೆಟ್ನ ಹಣವನ್ನು ಸರ್ಕಾರ ಬೇರೆಡೆ ತಿರುಗಿಸಿಲ್ಲ’ ಎಂದು ಸ್ಪಷ್ಟಪಡಿಸಿದ ಸತೀಶ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ ಬಜೆಟ್ನಲ್ಲಿ ರಾಜ್ಯದ ಸಂಪನ್ಮೂಲಗಳಿಂದ ₹40,000 ಕೋಟಿ ಹಣವನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಒದಗಿಸಿದ್ದಾರೆ’ ಎಂದು ತಿಳಿಸಿದರು.</p><p>ನಿಪ್ಪಾಣಿ ನಗರಸಭೆ ಮೇಲೆ ಎನ್ಸಿಪಿ ಬೆಂಬಲಿತ ಸದಸ್ಯರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸತೀಶ, ‘ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಹೊರತುಪಡಿಸಿದರೆ, ಬೇರೆ ಯಾವುದೇ ಧ್ವಜ ಹಾರಿಸಲು ಅವಕಾಶವಿಲ್ಲ. ಈ ಘಟನೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ರಾಷ್ಟ್ರಧ್ವಜ ಹಾರಿಸಿದ ನಂತರ ಭಗವಾ ಧ್ವಜ ಹಾರಿಸಲು ಯತ್ನಿಸಿದವರ ವಿರುದ್ಧ ಜಿಲ್ಲಾ ಪೊಲೀಸರು ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>