ರಾಜ್ಯದಲ್ಲಿ ಜುಲೈ 5ರಿಂದ ಅನ್ ಲಾಕ್ ಘೋಷಣೆ ಮಾಡಲಾಗಿದ್ದು, ದೇವಸ್ಥಾನಗಳನ್ನು ತೆರೆಯಲು ಅವಕಾಶ ಕೊಡಲಾಗಿದೆ. ಆದರೆ, ಯಲ್ಲಮ್ಮ ದೇವಸ್ಥಾನಕ್ಕೆ ನೆರೆಯ ಮಹಾರಾಷ್ಟ್ರದ ಭಕ್ತರು ಹೆಚ್ಚಾಗಿ ಬರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ದರ್ಶನ ನಿಷೇಧ ಮುಂದುವರಿಸಲಾಗಿದೆ. ಆ ರಾಜ್ಯದಲ್ಲಿ ಕೋವಿಡ್ ಮತ್ತು ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಿರುವುದು ಇದಕ್ಕೆ ಕಾರಣವಾಗಿದೆ.