<p><strong>ಸವದತ್ತಿ (ಬೆಳಗಾವಿ ಜಿಲ್ಲೆ):</strong> ಮಹಿಳೆಯೊಬ್ಬರನ್ನು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಅ.13 ರಂದು ಇಲ್ಲಿನ ರಾಮಾಪೂರ ಸೈಟ ಬಡಾವಣೆಯ ಹೂಲಿ ಅಜ್ಜನ ಮಠದ ಹತ್ತಿರ ನಡೆದಿದೆ. ಮೃತ ದೇಹದ ದುರ್ನಾತದಿಂದ ಈ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.</p>.<p>ಕೆಎಸ್ಆರ್ಟಿಸಿಯಲ್ಲಿ ನಿರ್ವಾಹಕಿಯಾಗಿ ಕರ್ತವ್ಯದಲ್ಲಿದ್ದ ಕಾಶವ್ವ ಕರೀಕಟ್ಟಿ (34) ಕೊಲೆಯಾದ ಮಹಿಳೆ. ನಿಪ್ಪಾಣಿ ಠಾಣೆಯ ಕಾನ್ಸ್ಟೆಬಲ್ ಸಂತೋಷ ಕಾಂಬಳೆ (35) ಕೊಲೆ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.</p>.<p><strong>ಘಟನೆ ಹಿನ್ನೆಲೆ:</strong> ಬೈಲಹೊಂಗಲ ತಾಲ್ಲೂಕಿನ ಬೆಳವಡಿ ಗ್ರಾಮದ ಕಾಶವ್ವ ಹಾಗೂ ನಿಪ್ಪಾಣಿಯ ಕಾನ್ಸ್ಟೆಬಲ್ ಸಂತೋಷ ಕಾಂಬಳೆ ಇಬ್ಬರು ಪ್ರೀತಿಸಿ 2013ರಲ್ಲಿ ವಿವಾಹವಾಗಿದ್ದರು. ವರಿಗೆ 11 ವರ್ಷದ ಪುತ್ರ ಇದ್ದಾನೆ.</p>.<p>ನಿಪ್ಪಾಣಿಯಲ್ಲಿಯೇ ಪತಿ, ಪತ್ನಿಯರ ಮಧ್ಯೆ ಕಲಹ ನಡೆದಿತ್ತು. ಇದರಿಂದ ಬೇಸತ್ತ ಪತ್ನಿ ಕಾಶವ್ವ ಸವದತ್ತಿ ಡಿಪೊಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಸವದತ್ತಿಗೂ ಬಂದ ಸಂತೋಷ ಪತ್ನಿಯನ್ನು ಸತಾಯಿಸುತ್ತಿದ್ದ. ಈ ಕುರಿತು ಪತ್ನಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಬಳಿಕ ಸಂತೋಷನನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿತ್ತು.</p>.<p>ಜೊತೆಗೆ ಪತ್ನಿ ಇತ್ತೀಚಿಗೆ ಪತಿಯಿಂದ ವಿವಾಹ ವಿಚ್ಛೇದನ ಪಡೆದಿದ್ದಳು. ಆದಾಗ್ಯೂ ಇಬ್ಬರೂ ಸಂಪರ್ಕದಲ್ಲಿದ್ದರು ಎಂದು ತಿಳಿದು ಬಂದಿದೆ. ಅ. 13 ರಂದು ಪತ್ನಿ ಮನೆಗೆ ಬಂದು ಜಗಳವಾಡಿದ ಸಂತೋಷ, ಮಾರಕಾಸ್ತ್ರದಿಂದ ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈ ವಿಷಯ ಬಹಿರಂಗವಾಗದಿರಲೆಂದು ಮನೆಗೆ ಬೀಗ ಹಾಕಿ ಹೋಗಿದ್ದನು.</p>.<p>ಸೇವೆಗೆ ಬಾರದ ಕಾಶವ್ವ ಅವರನ್ನು ಕಾಣಲು ಸಹೋದ್ಯೋಗಿಗಳು ಹಾಗೂ ಸಂಬಂಧಿಕರು ಗುರುವಾರ ರಾತ್ರಿ ಮನೆಗೆ ಬಂದಾಗ ದುರ್ನಾತ ಬಂದಿದ್ದರಿಂಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆ ತಂದು, ತನಿಖೆ ಮುಂದುವರೆಸಲಾಗಿದೆ.</p>
<p><strong>ಸವದತ್ತಿ (ಬೆಳಗಾವಿ ಜಿಲ್ಲೆ):</strong> ಮಹಿಳೆಯೊಬ್ಬರನ್ನು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಅ.13 ರಂದು ಇಲ್ಲಿನ ರಾಮಾಪೂರ ಸೈಟ ಬಡಾವಣೆಯ ಹೂಲಿ ಅಜ್ಜನ ಮಠದ ಹತ್ತಿರ ನಡೆದಿದೆ. ಮೃತ ದೇಹದ ದುರ್ನಾತದಿಂದ ಈ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.</p>.<p>ಕೆಎಸ್ಆರ್ಟಿಸಿಯಲ್ಲಿ ನಿರ್ವಾಹಕಿಯಾಗಿ ಕರ್ತವ್ಯದಲ್ಲಿದ್ದ ಕಾಶವ್ವ ಕರೀಕಟ್ಟಿ (34) ಕೊಲೆಯಾದ ಮಹಿಳೆ. ನಿಪ್ಪಾಣಿ ಠಾಣೆಯ ಕಾನ್ಸ್ಟೆಬಲ್ ಸಂತೋಷ ಕಾಂಬಳೆ (35) ಕೊಲೆ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.</p>.<p><strong>ಘಟನೆ ಹಿನ್ನೆಲೆ:</strong> ಬೈಲಹೊಂಗಲ ತಾಲ್ಲೂಕಿನ ಬೆಳವಡಿ ಗ್ರಾಮದ ಕಾಶವ್ವ ಹಾಗೂ ನಿಪ್ಪಾಣಿಯ ಕಾನ್ಸ್ಟೆಬಲ್ ಸಂತೋಷ ಕಾಂಬಳೆ ಇಬ್ಬರು ಪ್ರೀತಿಸಿ 2013ರಲ್ಲಿ ವಿವಾಹವಾಗಿದ್ದರು. ವರಿಗೆ 11 ವರ್ಷದ ಪುತ್ರ ಇದ್ದಾನೆ.</p>.<p>ನಿಪ್ಪಾಣಿಯಲ್ಲಿಯೇ ಪತಿ, ಪತ್ನಿಯರ ಮಧ್ಯೆ ಕಲಹ ನಡೆದಿತ್ತು. ಇದರಿಂದ ಬೇಸತ್ತ ಪತ್ನಿ ಕಾಶವ್ವ ಸವದತ್ತಿ ಡಿಪೊಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಸವದತ್ತಿಗೂ ಬಂದ ಸಂತೋಷ ಪತ್ನಿಯನ್ನು ಸತಾಯಿಸುತ್ತಿದ್ದ. ಈ ಕುರಿತು ಪತ್ನಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಬಳಿಕ ಸಂತೋಷನನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿತ್ತು.</p>.<p>ಜೊತೆಗೆ ಪತ್ನಿ ಇತ್ತೀಚಿಗೆ ಪತಿಯಿಂದ ವಿವಾಹ ವಿಚ್ಛೇದನ ಪಡೆದಿದ್ದಳು. ಆದಾಗ್ಯೂ ಇಬ್ಬರೂ ಸಂಪರ್ಕದಲ್ಲಿದ್ದರು ಎಂದು ತಿಳಿದು ಬಂದಿದೆ. ಅ. 13 ರಂದು ಪತ್ನಿ ಮನೆಗೆ ಬಂದು ಜಗಳವಾಡಿದ ಸಂತೋಷ, ಮಾರಕಾಸ್ತ್ರದಿಂದ ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈ ವಿಷಯ ಬಹಿರಂಗವಾಗದಿರಲೆಂದು ಮನೆಗೆ ಬೀಗ ಹಾಕಿ ಹೋಗಿದ್ದನು.</p>.<p>ಸೇವೆಗೆ ಬಾರದ ಕಾಶವ್ವ ಅವರನ್ನು ಕಾಣಲು ಸಹೋದ್ಯೋಗಿಗಳು ಹಾಗೂ ಸಂಬಂಧಿಕರು ಗುರುವಾರ ರಾತ್ರಿ ಮನೆಗೆ ಬಂದಾಗ ದುರ್ನಾತ ಬಂದಿದ್ದರಿಂಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆ ತಂದು, ತನಿಖೆ ಮುಂದುವರೆಸಲಾಗಿದೆ.</p>