<p>ಸವದತ್ತಿ: ಜಲಸಂಪನ್ಮೂಲ ಇಲಾಖೆಯ ಸವದತ್ತಿ ವ್ಯಾಪ್ತಿಯಲ್ಲಿನ ಮಲಪ್ರಭಾ ಬಲದಂಡೆ ಕಾಲುವೆಯ ಮುಖ್ಯ ನಿಯಂತ್ರಣ ಗೇಟ್ಗಳ ಸುಮಾರು ₹ 65 ಲಕ್ಷ ಅಂದಾಜು ಮೊತ್ತದ ದುರಸ್ತಿ ಕಾಮಗಾರಿಗೆ ಬುಧವಾರ ಶಾಸಕ ವಿಶ್ವಾಸ್ ವೈದ್ಯ ಭೂಮಿಪೂಜೆ ನೆರವೇರಿಸುವದರ ಮೂಲಕ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ನಮ್ಮ ಭಾಗದ ರೈತರ ಜೀವನಾಡಿ ಯಾದ ಮಲಪ್ರಭಾ ಯೋಜನೆಯ ಕಾಲುವೆಗಳ ಸುಸ್ಥಿತಿ ಹಾಗೂ ಸುಧಾರಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಲುವೆಯ ಗೇಟುಗಳ ಸುಧಾ ರಣೆಯಿಂದ ನೀರಿನ ಸೋರಿಕೆಯನ್ನು ತಡೆಗಟ್ಟಿ, ಕೊನೆಯ ಹಂತದ ರೈತರ ಜಮೀನುಗಳಿಗೂ ಸಮರ್ಪಕವಾಗಿ ನೀರು ತಲುಪಿಸಿ ಅನುಕೂಲ ಕಲ್ಪಿಸಲಾಗುವದು ಎಂದರು.</p>.<p>ರೈತರ ಹಿತರಕ್ಷಣೆ ಮತ್ತು ನೀರಾವರಿ ಸೌಲಭ್ಯಗಳ ಬಲವರ್ಧನೆಗೆ ಸದಾ ಬದ್ಧವಿರುವದಾಗಿ ತಿಳಿಸಿದ ಅವರು ಈ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸು ವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ರೈತ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-21-1792810767</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸವದತ್ತಿ: ಜಲಸಂಪನ್ಮೂಲ ಇಲಾಖೆಯ ಸವದತ್ತಿ ವ್ಯಾಪ್ತಿಯಲ್ಲಿನ ಮಲಪ್ರಭಾ ಬಲದಂಡೆ ಕಾಲುವೆಯ ಮುಖ್ಯ ನಿಯಂತ್ರಣ ಗೇಟ್ಗಳ ಸುಮಾರು ₹ 65 ಲಕ್ಷ ಅಂದಾಜು ಮೊತ್ತದ ದುರಸ್ತಿ ಕಾಮಗಾರಿಗೆ ಬುಧವಾರ ಶಾಸಕ ವಿಶ್ವಾಸ್ ವೈದ್ಯ ಭೂಮಿಪೂಜೆ ನೆರವೇರಿಸುವದರ ಮೂಲಕ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ನಮ್ಮ ಭಾಗದ ರೈತರ ಜೀವನಾಡಿ ಯಾದ ಮಲಪ್ರಭಾ ಯೋಜನೆಯ ಕಾಲುವೆಗಳ ಸುಸ್ಥಿತಿ ಹಾಗೂ ಸುಧಾರಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಲುವೆಯ ಗೇಟುಗಳ ಸುಧಾ ರಣೆಯಿಂದ ನೀರಿನ ಸೋರಿಕೆಯನ್ನು ತಡೆಗಟ್ಟಿ, ಕೊನೆಯ ಹಂತದ ರೈತರ ಜಮೀನುಗಳಿಗೂ ಸಮರ್ಪಕವಾಗಿ ನೀರು ತಲುಪಿಸಿ ಅನುಕೂಲ ಕಲ್ಪಿಸಲಾಗುವದು ಎಂದರು.</p>.<p>ರೈತರ ಹಿತರಕ್ಷಣೆ ಮತ್ತು ನೀರಾವರಿ ಸೌಲಭ್ಯಗಳ ಬಲವರ್ಧನೆಗೆ ಸದಾ ಬದ್ಧವಿರುವದಾಗಿ ತಿಳಿಸಿದ ಅವರು ಈ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸು ವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ರೈತ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-21-1792810767</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>