<p>ಅಥಣಿ: ‘ವಿಧಾನಪರಿಷತ್ಗೆ ಸ್ಥಳೀಯ ಸಂಸ್ಥೆಗಳಿಂದ ನಡೆದ ಚುನಾವಣೆಯಲ್ಲಿ ಮಹಾಂತೇಶ ಕವಟಗಿಮಠ ಅವರು ಸೋತಿದ್ದು ನಮ್ಮಿಂದಲೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದಿದ್ದರೆ ಸೋಲುತ್ತಿರಲಿಲ್ಲ’ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.</p>.<p>ಇಲ್ಲಿನ ಆರ್.ಎಚ್. ಕುಲಕರ್ಣಿ ಸಭಾಭವನದಲ್ಲಿ ವಿಧಾನಪರಿಷತ್ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಿಮಿತ್ತ ಬಿಜೆಪಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಾವೆಲ್ಲೂ ಒಟ್ಟಾದರೆ ಎಂತಹ ಚುನಾವಣೆಯಲ್ಲೂ ಗೆಲ್ಲಬಹುದು. ಆದರೆ, ನಾವೆಲ್ಲಾ ಒಗ್ಗಟ್ಟಾಗಿಲ್ಲ. ಇನ್ನಾದರೂ ನಾವು ಒಂದಾಗೋಣ. ಮಹಾಂತೇಶಗೆ ಅದ ಪರಿಸ್ಥಿತಿ ಅರುಣ ಶಹಾಪುರ ಹಾಗೂ ಹಣಮಂತ ನಿರಾಣಿ ಅವರಿಗೆ ಬಾರದಿರಲಿ’ ಎಂದು ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಅವರು ಹೇಳಿದರು.</p>.<p>‘ಅರುಣ ಜನಪರ ನಾಯಕ. ಅವರ ಮನೆಗೆ ಒಮ್ಮೆ ಹತ್ತು ಮಂದಿ ಹೋದರೆ ಕೂರುವುದಕ್ಕೆ ವ್ಯವಸ್ಥೆ ಇಲ್ಲ. ಹಣವಿದ್ದರೆ ರಾಜಕಾರಣ ಎನ್ನುವ ಪರಿಸ್ಥಿತಿಯಲ್ಲಿ ಅವರು ಮಾದರಿಯಾಗಿ ಕಾಣಿಸುತ್ತಾರೆ. ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಸಂಭಾವಿತ ರಾಜಕಾರಣಿಯಾಗಿದ್ದಾರೆ’ ಎಂದು ತಿಳಿಸಿದರು.</p>.<p>ಸವದಿ ಅವರು ತಮ್ಮ ಕಾರ್ಯವೈಖರಿ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದನ್ನು ಕಂಡು ಅರುಣ ಶಹಾಪುರ ವೇದಿಕೆಯಲ್ಲೇ ಬಿಕ್ಕಿಬಿಕ್ಕಿ ಅತ್ತರು.</p>.<p>‘ದೇವರ ಸಾಕ್ಷಿಯಾಗಿ ನಾವೆಲ್ಲರೂ ಪ್ರಾಮಾಣಿಕವಾಗಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ಬೆಳಗಾವಿ ಜಿಲ್ಲೆಯ ಜನರು ನನ್ನ ಕೈಬಿಡಲಿಲ್ಲ ಎಂಬ ಮಾತು ನಿನ್ನಿಂದಲೇ ಬರಲಿದೆ’ ಎಂದು ಶಹಾಪುರ ಅವರನ್ನು ಉದ್ದೇಶಿಸಿ ಸವದಿ ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಮಾತನಾಡಿ, ‘ಕಾಂಗ್ರೆಸ್ನವರು ಆರ್ಎಸ್ಎಸ್ನವರಿಗೆ ಏಕೆ ಬೈಯುತ್ತಾರೆ ಎನ್ನುವುದು ಈವರೆಗೂ ತಿಳಿಯುತ್ತಿಲ್ಲ. ದೇಶಕ್ಕೆ ಉತ್ತಮ ನಾಯಕರನ್ನು ನೀಡಿದ್ದು ಆರ್ಎಸ್ಎಸ್. ಆ ನಾಯಕರ ಕುರಿತು ಪಠ್ಯಪುಸ್ತಕದಲ್ಲಿ ಹೆಸರು ಸೇರಿಸಬಾರದೇಕೆ?’ ಎಂದು ಕೇಳಿದರು.</p>.<p>ಸಚಿವ ಉಮೇಶ ಕತ್ತಿ ಮಾತನಾಡಿ, ‘ಶಿಕ್ಷಕರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಒಬ್ಬ ರಾಜಕಾರಣಿ. ಅವರು ಹೇಗೆ ಶಿಕ್ಷಕರ ಬಗ್ಗೆ ಕಾಳಜಿ ವಹಿಸಲು ಸಾಧ್ಯ? ಶಿಕ್ಷಕರ ಅಳಲು ಹೇಗೆ ಕೇಳುತ್ತಾನೆ?’ ಎಂದು ಪ್ರಕಾಶ ಹುಕ್ಕೇರಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಅಭ್ಯರ್ಥಿಗಳಾದ ಹಣಮಂತ ನಿರಾಣಿ ಹಾಗೂ ಅರುಣ ಶಹಾಪುರ ಮತಯಾಚನೆ ಮಾಡಿದರು.</p>.<p>ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಮಹೇಶ ಕುಮಠಳ್ಳಿ ಎನ್. ಮಹೇಶ್, ಶ್ರೀಮಂತ ಪಾಟೀಲ, ಪಿ.ರಾಜೀವ ಮಾತನಾಡಿದರು. ಮುಖಂಡರಾದ ಶಶಿಕಾಂತ ನಾಯಿಕ, ಉಜ್ವಲಾ ಬಡವನಾಚೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಥಣಿ: ‘ವಿಧಾನಪರಿಷತ್ಗೆ ಸ್ಥಳೀಯ ಸಂಸ್ಥೆಗಳಿಂದ ನಡೆದ ಚುನಾವಣೆಯಲ್ಲಿ ಮಹಾಂತೇಶ ಕವಟಗಿಮಠ ಅವರು ಸೋತಿದ್ದು ನಮ್ಮಿಂದಲೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದಿದ್ದರೆ ಸೋಲುತ್ತಿರಲಿಲ್ಲ’ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.</p>.<p>ಇಲ್ಲಿನ ಆರ್.ಎಚ್. ಕುಲಕರ್ಣಿ ಸಭಾಭವನದಲ್ಲಿ ವಿಧಾನಪರಿಷತ್ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಿಮಿತ್ತ ಬಿಜೆಪಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಾವೆಲ್ಲೂ ಒಟ್ಟಾದರೆ ಎಂತಹ ಚುನಾವಣೆಯಲ್ಲೂ ಗೆಲ್ಲಬಹುದು. ಆದರೆ, ನಾವೆಲ್ಲಾ ಒಗ್ಗಟ್ಟಾಗಿಲ್ಲ. ಇನ್ನಾದರೂ ನಾವು ಒಂದಾಗೋಣ. ಮಹಾಂತೇಶಗೆ ಅದ ಪರಿಸ್ಥಿತಿ ಅರುಣ ಶಹಾಪುರ ಹಾಗೂ ಹಣಮಂತ ನಿರಾಣಿ ಅವರಿಗೆ ಬಾರದಿರಲಿ’ ಎಂದು ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಅವರು ಹೇಳಿದರು.</p>.<p>‘ಅರುಣ ಜನಪರ ನಾಯಕ. ಅವರ ಮನೆಗೆ ಒಮ್ಮೆ ಹತ್ತು ಮಂದಿ ಹೋದರೆ ಕೂರುವುದಕ್ಕೆ ವ್ಯವಸ್ಥೆ ಇಲ್ಲ. ಹಣವಿದ್ದರೆ ರಾಜಕಾರಣ ಎನ್ನುವ ಪರಿಸ್ಥಿತಿಯಲ್ಲಿ ಅವರು ಮಾದರಿಯಾಗಿ ಕಾಣಿಸುತ್ತಾರೆ. ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಸಂಭಾವಿತ ರಾಜಕಾರಣಿಯಾಗಿದ್ದಾರೆ’ ಎಂದು ತಿಳಿಸಿದರು.</p>.<p>ಸವದಿ ಅವರು ತಮ್ಮ ಕಾರ್ಯವೈಖರಿ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದನ್ನು ಕಂಡು ಅರುಣ ಶಹಾಪುರ ವೇದಿಕೆಯಲ್ಲೇ ಬಿಕ್ಕಿಬಿಕ್ಕಿ ಅತ್ತರು.</p>.<p>‘ದೇವರ ಸಾಕ್ಷಿಯಾಗಿ ನಾವೆಲ್ಲರೂ ಪ್ರಾಮಾಣಿಕವಾಗಿ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ. ಬೆಳಗಾವಿ ಜಿಲ್ಲೆಯ ಜನರು ನನ್ನ ಕೈಬಿಡಲಿಲ್ಲ ಎಂಬ ಮಾತು ನಿನ್ನಿಂದಲೇ ಬರಲಿದೆ’ ಎಂದು ಶಹಾಪುರ ಅವರನ್ನು ಉದ್ದೇಶಿಸಿ ಸವದಿ ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಮಾತನಾಡಿ, ‘ಕಾಂಗ್ರೆಸ್ನವರು ಆರ್ಎಸ್ಎಸ್ನವರಿಗೆ ಏಕೆ ಬೈಯುತ್ತಾರೆ ಎನ್ನುವುದು ಈವರೆಗೂ ತಿಳಿಯುತ್ತಿಲ್ಲ. ದೇಶಕ್ಕೆ ಉತ್ತಮ ನಾಯಕರನ್ನು ನೀಡಿದ್ದು ಆರ್ಎಸ್ಎಸ್. ಆ ನಾಯಕರ ಕುರಿತು ಪಠ್ಯಪುಸ್ತಕದಲ್ಲಿ ಹೆಸರು ಸೇರಿಸಬಾರದೇಕೆ?’ ಎಂದು ಕೇಳಿದರು.</p>.<p>ಸಚಿವ ಉಮೇಶ ಕತ್ತಿ ಮಾತನಾಡಿ, ‘ಶಿಕ್ಷಕರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಒಬ್ಬ ರಾಜಕಾರಣಿ. ಅವರು ಹೇಗೆ ಶಿಕ್ಷಕರ ಬಗ್ಗೆ ಕಾಳಜಿ ವಹಿಸಲು ಸಾಧ್ಯ? ಶಿಕ್ಷಕರ ಅಳಲು ಹೇಗೆ ಕೇಳುತ್ತಾನೆ?’ ಎಂದು ಪ್ರಕಾಶ ಹುಕ್ಕೇರಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಅಭ್ಯರ್ಥಿಗಳಾದ ಹಣಮಂತ ನಿರಾಣಿ ಹಾಗೂ ಅರುಣ ಶಹಾಪುರ ಮತಯಾಚನೆ ಮಾಡಿದರು.</p>.<p>ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಮಹೇಶ ಕುಮಠಳ್ಳಿ ಎನ್. ಮಹೇಶ್, ಶ್ರೀಮಂತ ಪಾಟೀಲ, ಪಿ.ರಾಜೀವ ಮಾತನಾಡಿದರು. ಮುಖಂಡರಾದ ಶಶಿಕಾಂತ ನಾಯಿಕ, ಉಜ್ವಲಾ ಬಡವನಾಚೆ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>