<p>ಸವದತ್ತಿ: ಕ್ಷಯರೋಗ ಕುರಿತಾದ ತಪ್ಪು ಕಲ್ಪನೆಗಳಿಂದ ದೂರವಿರಿ. ರೋಗದ ಲಕ್ಷಣ ಕಂಡಲ್ಲಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೌನೇಶ್ವರ ಅರ್ಕಸಾಲಿ ಹೇಳಿದರು.</p>.<p>ವಿವೇಕಾನಂದ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜರುಗಿದ ವಿಶ್ವ ಕ್ಷಯರೋಗ ನಿರ್ಮೂಲನೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಸಿದ್ದೇಶ್ವರ ಡೋಣಿ ಮಾತನಾಡಿ, ಎರಡು ವಾರಕ್ಕಿಂತ ಮೇಲ್ಪಟ್ಟ ಕೆಮ್ಮು, ಸಾಯಂಕಾಲ ಜ್ವರ, ಹಸಿವು ಆಗದದೇ ಇರುವುದು ಕ್ಷಯ ರೋಗದ ಆರಂಬಿಕ ಲಕ್ಷಣಗಳಾಗಿವೆ ಎಂದರು.</p>.<p>ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ.ರಾಜೇಂದ್ರ ಚಟ್ನಿಸ್ ಮಾತನಾಡಿದರು. ರಾಜಶೇಖರ ತುರಾದಿ, ವಿಠ್ಠಲ ಮಾಳೇದ, ಮುರಗೇಶ ಕರಜಗಿಮಠ, ಮಂಜುನಾಥ ಹಟ್ಟಿ, ವಿಜಯಲಕ್ಷ್ಮಿ ಹಳ್ಳಿಕೇರಿ, ಪುಷ್ಪಾ ನರೋಟಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-21-57093840</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸವದತ್ತಿ: ಕ್ಷಯರೋಗ ಕುರಿತಾದ ತಪ್ಪು ಕಲ್ಪನೆಗಳಿಂದ ದೂರವಿರಿ. ರೋಗದ ಲಕ್ಷಣ ಕಂಡಲ್ಲಿ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೌನೇಶ್ವರ ಅರ್ಕಸಾಲಿ ಹೇಳಿದರು.</p>.<p>ವಿವೇಕಾನಂದ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜರುಗಿದ ವಿಶ್ವ ಕ್ಷಯರೋಗ ನಿರ್ಮೂಲನೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಸಿದ್ದೇಶ್ವರ ಡೋಣಿ ಮಾತನಾಡಿ, ಎರಡು ವಾರಕ್ಕಿಂತ ಮೇಲ್ಪಟ್ಟ ಕೆಮ್ಮು, ಸಾಯಂಕಾಲ ಜ್ವರ, ಹಸಿವು ಆಗದದೇ ಇರುವುದು ಕ್ಷಯ ರೋಗದ ಆರಂಬಿಕ ಲಕ್ಷಣಗಳಾಗಿವೆ ಎಂದರು.</p>.<p>ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ.ರಾಜೇಂದ್ರ ಚಟ್ನಿಸ್ ಮಾತನಾಡಿದರು. ರಾಜಶೇಖರ ತುರಾದಿ, ವಿಠ್ಠಲ ಮಾಳೇದ, ಮುರಗೇಶ ಕರಜಗಿಮಠ, ಮಂಜುನಾಥ ಹಟ್ಟಿ, ವಿಜಯಲಕ್ಷ್ಮಿ ಹಳ್ಳಿಕೇರಿ, ಪುಷ್ಪಾ ನರೋಟಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-21-57093840</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>