<p>ಸವದತ್ತಿ: ಇಲ್ಲಿನ ರಾಘವೇಂದ್ರ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗೆ ಶಾಸಕ ವಿಶ್ವಾಸ್ ವೈದ್ಯ ಮಂಗಳವಾರ ಭೂಮಿ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಶಿರಸಂಗಿ ಸರ್ಕಾರಿ ಶಾಲಾ ಆವರಣದಲ್ಲಿ 17.70 ಲಕ್ಷ ವೆಚ್ಚದ ನೂತನ ಕೊಠಡಿ ಹಾಗೂ ವಿವಿಧ ಸೌಲಭ್ಯಗಳನ್ನು ಉದ್ಘಾಟಿಸಲಾಗಿದೆ. ಜೊತೆಗೆ ಶಿರಸಂಗಿ ಗ್ರಾಮದ ಹೊಸೂರ ಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ ಮೂಲಸೌಲಭ್ಯಗಳನ್ನು ಕಲ್ಪಿಸಲು ₹50 ಲಕ್ಷ ಅನುದಾನ ನೀಡಲಾಗಿದೆ ಎಂದರು</p>.<p>ಯಡ್ರಾಂವಿ ಗ್ರಾಮದಿಂದ ಶಿರೂರುವರೆಗೆ ರಸ್ತೆ ಸುಧಾರಣೆಗೆ ₹1.85 ಕೋಟಿ ಮತ್ತು ಚುಳಕಿಯಿಂದ ಮನಿಕಟ್ಟಿವರೆಗೆ ರಸ್ತೆ ಅಭಿವೃದ್ಧಿಗೆ ₹4.95 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿದೆ ಎಂದರು.</p>.<p>ತಹಶೀಲ್ದಾರ್ ಎಂ.ಎನ್.ಹೆಗ್ಗನ್ನವರ, ಆರ್.ಎಸ್.ಕದಂ, ಜಗದೀಶ ಶಿರಸಂಗಿ, ಎಂ.ಕೆ.ಬೇವೂರ, ಗದಿಗೆಪ್ಪ ಕುರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-21-181969448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸವದತ್ತಿ: ಇಲ್ಲಿನ ರಾಘವೇಂದ್ರ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗೆ ಶಾಸಕ ವಿಶ್ವಾಸ್ ವೈದ್ಯ ಮಂಗಳವಾರ ಭೂಮಿ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಶಿರಸಂಗಿ ಸರ್ಕಾರಿ ಶಾಲಾ ಆವರಣದಲ್ಲಿ 17.70 ಲಕ್ಷ ವೆಚ್ಚದ ನೂತನ ಕೊಠಡಿ ಹಾಗೂ ವಿವಿಧ ಸೌಲಭ್ಯಗಳನ್ನು ಉದ್ಘಾಟಿಸಲಾಗಿದೆ. ಜೊತೆಗೆ ಶಿರಸಂಗಿ ಗ್ರಾಮದ ಹೊಸೂರ ಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ ಮೂಲಸೌಲಭ್ಯಗಳನ್ನು ಕಲ್ಪಿಸಲು ₹50 ಲಕ್ಷ ಅನುದಾನ ನೀಡಲಾಗಿದೆ ಎಂದರು</p>.<p>ಯಡ್ರಾಂವಿ ಗ್ರಾಮದಿಂದ ಶಿರೂರುವರೆಗೆ ರಸ್ತೆ ಸುಧಾರಣೆಗೆ ₹1.85 ಕೋಟಿ ಮತ್ತು ಚುಳಕಿಯಿಂದ ಮನಿಕಟ್ಟಿವರೆಗೆ ರಸ್ತೆ ಅಭಿವೃದ್ಧಿಗೆ ₹4.95 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿದೆ ಎಂದರು.</p>.<p>ತಹಶೀಲ್ದಾರ್ ಎಂ.ಎನ್.ಹೆಗ್ಗನ್ನವರ, ಆರ್.ಎಸ್.ಕದಂ, ಜಗದೀಶ ಶಿರಸಂಗಿ, ಎಂ.ಕೆ.ಬೇವೂರ, ಗದಿಗೆಪ್ಪ ಕುರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-21-181969448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>