‘ಕಳೆದ ಎರಡು ವರ್ಷಗಳಿಂದ ಸಮುದಾಯಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ತಲುಪಿಸುವ ಯೋಜನೆಗಳ ಗುರಿ ಸಾಧನೆ ಆಗಿಲ್ಲ. ಗಂಗಾ ಕಲ್ಯಾಣ ಉದ್ಯಮಶೀಲತೆ ಸೇರಿದಂತೆ ಯಾವುದೇ ಯೋಜನೆಗಳು ಸಮರ್ಪಕ ಅನುಷ್ಠಾನವಾಗಿಲ್ಲ’ ಎಂದೂ ಪಲ್ಲವಿ ಬೇಸರ ವ್ಯಕ್ತಪಡಿಸಿದರು. ‘ಅಲೆಮಾರಿ ಸಮುದಾಯಗಳ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಅಂಬೇಡ್ಕರ್ ನಿಗಮಕ್ಕೆ ಪಟ್ಟಿ ಸಲ್ಲಿಸಿದೆ. ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಕಾರಣ ಗಂಗಾಕಲ್ಯಾಣ ಯೋಜನೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ಮುಂದಿನ ಎರಡು ತಿಂಗಳ ಒಳಗಾಗಿ ಯೋಜನೆ ಜನರಿಗೆ ತಲುಪಿಸಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ ಮಾಹಿತಿ ನೀಡಿದರು.