ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಅಭಿಪ್ರಾಯ ಸಂಗ್ರಹ 10ರಂದು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ;
Last Updated 4 ಜನವರಿ 2020, 15:46 IST
ಅಕ್ಷರ ಗಾತ್ರ

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಇದೇ 10ರಂದು ಇಲ್ಲಿನ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜನರ ಅಭಿಪ್ರಾಯ ಆಲಿಸಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ಸಭೆ ಆರಂಭಗೊಳ್ಳಲಿದೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ (ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ) ಸಾರ್ವಜನಿಕರು ಈ ಸಮಾವೇಶದಲ್ಲಿ ಭಾಗವಹಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ಮನವಿ ಸಲ್ಲಿಸಬಹುದು.

ಮೌಖಿಕವಾಗಿ ಮನವಿ ಮಂಡಿಸುವವರು ತಮ್ಮ ಹೆಸರನ್ನು ಕಾರ್ಯಕ್ರಮದ ಮುಂಚೆಯೇ ನಿಗಿದಿಪಡಿಸಿದ ಕೌಂಟರ್‌ಗಳಲ್ಲಿ ನೋಂದಾಯಿಸಿಕೊಂಡಿರಬೇಕು. ಹೆಸರನ್ನು ನೋಂದಾಯಿಸಿಕೊಂಡವರಿಗೆ ಮಾತ್ರ ಸಮಾವೇಶದಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಲು ಅವಕಾಶವಿರುತ್ತದೆ.

ಇದನ್ನು ಜಿಲ್ಲಾವಾರು ನೋಂದಾಯಿಸಲಾಗುತ್ತದೆ. ಲಿಖಿತ ರೂಪದಲ್ಲಿ ಸಲ್ಲಿಸುವವರು ಸಮಾವೇಶದ ಸಮಯದಲ್ಲಿ ಸಂಬಂಧಿಸಿದ ಅಧಿಕಾರಿಗೆ ಸಲ್ಲಿಸಬಹುದಾಗಿದೆ. ಮೌಖಿಕವಾಗಿ ವಿಚಾರ ಮಂಡಿಸುವವರು ತಮ್ಮ ಅಭಿಪ್ರಾಯವನ್ನು ವಿಷಯಕ್ಕೆ ಸೀಮಿತ ಮಾಡಿಕೊಂಡು ಸಂಕ್ಷಿಪ್ತವಾಗಿ ತಮ್ಮ ಅಭಿಪ್ರಾಯ ಮಂಡಿಸಬಹುದಾಗಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT