ಅಂದು ಬೆಳಿಗ್ಗೆ 10.30ಕ್ಕೆ ಸಭೆ ಆರಂಭಗೊಳ್ಳಲಿದೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ (ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ) ಸಾರ್ವಜನಿಕರು ಈ ಸಮಾವೇಶದಲ್ಲಿ ಭಾಗವಹಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ಮನವಿ ಸಲ್ಲಿಸಬಹುದು.