<p><strong>ಬೆಳಗಾವಿ:</strong> ‘ಪಿಯುಸಿ ಮೊದಲ ವರ್ಷ ಪ್ರವೇಶ ಪಡೆಯಲು ಬಯಸುವ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಯ್ಕರ್ ಎಜ್ಯುಕೇಷನ್ ಸೊಸೈಟಿ ವತಿಯಿಂದ ₹ 25 ಲಕ್ಷ ವಿದ್ಯಾರ್ಥಿವೇತನ ನೀಡಲು ನಿರ್ಧರಿಸಲಾಗಿದೆ’ ಎಂದು ರವೀಂದ್ರನಾಥ ಟ್ಯಾಗೋರ್ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಸಿ.ಎನ್. ನಾಯ್ಕರ್ ಹೇಳಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಸೆಸ್ಸೆಲ್ಸಿ ಪಾಸಾದ ನಂತರ ಬಹಳಷ್ಟು ವಿದ್ಯಾರ್ಥಿಗಳು ಆರ್ಥಿಕ ತೊಂದರೆಯಿಂದಾಗಿ ಪಿಯುಸಿ ಶಿಕ್ಷಣ ಮುಂದುವರಿಸುತ್ತಿಲ್ಲ. ಹೀಗಾಗಿ ಅವರಿಗೆ ಆರ್ಥಿಕ ಸಹಾಯ ಮಾಡಲು ತೀರ್ಮಾನಿಸಿದ್ದೇವೆ’ ಎಂದು ನುಡಿದರು.</p>.<p>‘ಸಂಸ್ಥೆಯ ವತಿಯಿಂದ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅತಿ ಹೆಚ್ಚು ಅಂಕ ಗಳಿಸಿದ ಶೇ 10ರಷ್ಟು ಅಗ್ರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು’ ಎಂದು ಹೇಳಿದರು.</p>.<p>‘ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಲ್ಲಿ ಅಷ್ಟೇ ಅಲ್ಲದೇ, ಇತರ ಕಾಲೇಜುಗಳ ವಿದ್ಯಾರ್ಥಿಗಳೂ ಅರ್ಹತಾ ಪರೀಕ್ಷೆಯಲ್ಲಿ ಭಾಗವಹಿಸಬಹುದು. ಆಸಕ್ತ ವಿದ್ಯಾರ್ಥಿಗಳು ಇದೇ 25ರೊಳಗೆ ರವೀಂದ್ರನಾಥ ಟ್ಯಾಗೋರ್ ಪಿಯು ಕಾಲೇಜಿನಲ್ಲಿ ಹೆಸರು ನೋಂದಾಯಿಸಬೇಕು’ ಎಂದು ತಿಳಿಸಿದರು.</p>.<p>ನಾಯ್ಕರ್ ಎಜ್ಯುಕೇಷನ್ ಸೊಸೈಟಿಯ ಅಧ್ಯಕ್ಷೆ ಶ್ವೇತಾ ನಾಯ್ಕರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಪಿಯುಸಿ ಮೊದಲ ವರ್ಷ ಪ್ರವೇಶ ಪಡೆಯಲು ಬಯಸುವ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾಯ್ಕರ್ ಎಜ್ಯುಕೇಷನ್ ಸೊಸೈಟಿ ವತಿಯಿಂದ ₹ 25 ಲಕ್ಷ ವಿದ್ಯಾರ್ಥಿವೇತನ ನೀಡಲು ನಿರ್ಧರಿಸಲಾಗಿದೆ’ ಎಂದು ರವೀಂದ್ರನಾಥ ಟ್ಯಾಗೋರ್ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಸಿ.ಎನ್. ನಾಯ್ಕರ್ ಹೇಳಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್ಸೆಸ್ಸೆಲ್ಸಿ ಪಾಸಾದ ನಂತರ ಬಹಳಷ್ಟು ವಿದ್ಯಾರ್ಥಿಗಳು ಆರ್ಥಿಕ ತೊಂದರೆಯಿಂದಾಗಿ ಪಿಯುಸಿ ಶಿಕ್ಷಣ ಮುಂದುವರಿಸುತ್ತಿಲ್ಲ. ಹೀಗಾಗಿ ಅವರಿಗೆ ಆರ್ಥಿಕ ಸಹಾಯ ಮಾಡಲು ತೀರ್ಮಾನಿಸಿದ್ದೇವೆ’ ಎಂದು ನುಡಿದರು.</p>.<p>‘ಸಂಸ್ಥೆಯ ವತಿಯಿಂದ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅತಿ ಹೆಚ್ಚು ಅಂಕ ಗಳಿಸಿದ ಶೇ 10ರಷ್ಟು ಅಗ್ರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು’ ಎಂದು ಹೇಳಿದರು.</p>.<p>‘ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಲ್ಲಿ ಅಷ್ಟೇ ಅಲ್ಲದೇ, ಇತರ ಕಾಲೇಜುಗಳ ವಿದ್ಯಾರ್ಥಿಗಳೂ ಅರ್ಹತಾ ಪರೀಕ್ಷೆಯಲ್ಲಿ ಭಾಗವಹಿಸಬಹುದು. ಆಸಕ್ತ ವಿದ್ಯಾರ್ಥಿಗಳು ಇದೇ 25ರೊಳಗೆ ರವೀಂದ್ರನಾಥ ಟ್ಯಾಗೋರ್ ಪಿಯು ಕಾಲೇಜಿನಲ್ಲಿ ಹೆಸರು ನೋಂದಾಯಿಸಬೇಕು’ ಎಂದು ತಿಳಿಸಿದರು.</p>.<p>ನಾಯ್ಕರ್ ಎಜ್ಯುಕೇಷನ್ ಸೊಸೈಟಿಯ ಅಧ್ಯಕ್ಷೆ ಶ್ವೇತಾ ನಾಯ್ಕರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>